Featured

ಬಜೆಟ್ ನಲ್ಲಿ ಬಹಳ ನಿರಾಸೆಯಾಗಿದೆ, ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್ – vishwanews24

ಬಜೆಟ್ ನಲ್ಲಿ ಬಹಳ ನಿರಾಸೆಯಾಗಿದೆ, ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಈ ಬಾರಿಯ ಬಜೆಟ್ ನಲ್ಲಿ ರಾಜ್ಯದ ಯೋಜನೆಗಳಿಗೆ ಆದ್ಯತೆ ನೀಡಬೇಕು, ನೀರಾವರಿ ಯೋಜನೆಗಳಿಗೆ ಈಗಾಗಲೇ ಘೋಷಣೆ ಮಾಡಿರುವ ಹಣ ಇನ್ನು ಬಿಡುಗಡೆಯಾಗಿಲ್ಲ. ಕರ್ನಾಟಕ ರಾಜ್ಯದಿಂದ ನೀವು ಆಯ್ಕೆಯಾಗಿದ್ದು, ರಾಜ್ಯದ ಯೋಜನೆಗಳು ಹಾಗೂ ಬೆಂಗಳೂರಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದ್ದೆ ಎಂದರು.

ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಕಾಲಾವಕಾಶ ಕೋರಿದ್ದೆ. ಕಳೆದ ಬಜೆಟ್ ಗಳಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5 ಸಾವಿರ ಕೋಟಿಯನ್ನು ಇನ್ನು ನೀಡಿಲ್ಲ. ಈ ಬಾರಿಯ ಬಜೆಟ್ ನಲ್ಲೂ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ಯಾವ ರೀತಿಯ ಹೋರಾಟ ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಚುನಾವಣಾ ಪೂರ್ವ ಬಜೆಟ್ ನಲ್ಲಿ ಜನರಿಗೆ ಏನು ನೀಡುತ್ತೇವೆ ಎಂಬುದನ್ನು ಸ್ಪಷ್ಟವಾಗಿ ಹೇಳಬಹುದಾಗಿತ್ತು. ಈ ಬಜೆಟ್ ನಲ್ಲಿ ಬಹಳ ನಿರಾಸೆಯಾಗಿದೆ” ಎಂದು ತಿಳಿಸಿದರು.

ಡಿ.ಕೆ. ಸುರೇಶ್ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, “ನಾನು ಅಖಂಡ ಭಾರತದ ಪ್ರಜೆ. ಸುರೇಶ್ ಅವರು ಜನರ ಬೇಸರ ಹಾಗೂ ಅಭಿಪ್ರಾಯವನ್ನು ಹೇಳಿದ್ದಾರೆ ಅಷ್ಟೇ. ನಮಗಾಗುತ್ತಿರುವ ಅನ್ಯಾಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾವೆಲ್ಲರೂ ಭಾರತ ಮಾತೆಯ ಮಕ್ಕಳು ನಾವು ಒಗ್ಗಟ್ಟಾಗಿರಬೇಕು. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಒಂದೇ. ಹಿಂದಿ ಭಾಗಕ್ಕೆ ಹೇಗೆ ಆದ್ಯತೆ ನೀಡಲಾಗುತ್ತಿದೆಯೋ ಅದೇ ರೀತಿ ನಮಗೂ ಆದ್ಯತೆ ನೀಡಬೇಕು” ಎಂದರು.

ಬಜೆಟ್ ಅನ್ಯಾಯದ ಬಗ್ಗೆ ಕೇಳಿದಾಗ, ನಮ್ಮ ರಾಜ್ಯದಿಂದ 26 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಲಾಗಿತ್ತು. ಈಗ 27ನೇಯವರೂ ಸೇರಿಕೊಂಡಿದ್ದಾರೆ. 27 ಸಂಸದರು ಸೇರಿ ನಮ್ಮ ರಾಜ್ಯಕ್ಕೆ ಏನು ತಂದಿದ್ದಾರೆ? ಈಗಲಾದರೂ 27 ಸಂಸದರು ಸಂಸತ್ತಿನ ಮುಂದೆ ಧರಣಿ ಮಾಡಲಿ ಎಂದು ಕೋರುತ್ತೇನೆ ಎಂದು ತಿಳಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

16 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago