ಬೆಂಗಳೂರು : ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಈ ಬಾರಿಯ ಬಜೆಟ್ ನಲ್ಲಿ ರಾಜ್ಯದ ಯೋಜನೆಗಳಿಗೆ ಆದ್ಯತೆ ನೀಡಬೇಕು, ನೀರಾವರಿ ಯೋಜನೆಗಳಿಗೆ ಈಗಾಗಲೇ ಘೋಷಣೆ ಮಾಡಿರುವ ಹಣ ಇನ್ನು ಬಿಡುಗಡೆಯಾಗಿಲ್ಲ. ಕರ್ನಾಟಕ ರಾಜ್ಯದಿಂದ ನೀವು ಆಯ್ಕೆಯಾಗಿದ್ದು, ರಾಜ್ಯದ ಯೋಜನೆಗಳು ಹಾಗೂ ಬೆಂಗಳೂರಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದ್ದೆ ಎಂದರು.
ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಕಾಲಾವಕಾಶ ಕೋರಿದ್ದೆ. ಕಳೆದ ಬಜೆಟ್ ಗಳಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5 ಸಾವಿರ ಕೋಟಿಯನ್ನು ಇನ್ನು ನೀಡಿಲ್ಲ. ಈ ಬಾರಿಯ ಬಜೆಟ್ ನಲ್ಲೂ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ಯಾವ ರೀತಿಯ ಹೋರಾಟ ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಚುನಾವಣಾ ಪೂರ್ವ ಬಜೆಟ್ ನಲ್ಲಿ ಜನರಿಗೆ ಏನು ನೀಡುತ್ತೇವೆ ಎಂಬುದನ್ನು ಸ್ಪಷ್ಟವಾಗಿ ಹೇಳಬಹುದಾಗಿತ್ತು. ಈ ಬಜೆಟ್ ನಲ್ಲಿ ಬಹಳ ನಿರಾಸೆಯಾಗಿದೆ” ಎಂದು ತಿಳಿಸಿದರು.
ಡಿ.ಕೆ. ಸುರೇಶ್ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, “ನಾನು ಅಖಂಡ ಭಾರತದ ಪ್ರಜೆ. ಸುರೇಶ್ ಅವರು ಜನರ ಬೇಸರ ಹಾಗೂ ಅಭಿಪ್ರಾಯವನ್ನು ಹೇಳಿದ್ದಾರೆ ಅಷ್ಟೇ. ನಮಗಾಗುತ್ತಿರುವ ಅನ್ಯಾಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾವೆಲ್ಲರೂ ಭಾರತ ಮಾತೆಯ ಮಕ್ಕಳು ನಾವು ಒಗ್ಗಟ್ಟಾಗಿರಬೇಕು. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಒಂದೇ. ಹಿಂದಿ ಭಾಗಕ್ಕೆ ಹೇಗೆ ಆದ್ಯತೆ ನೀಡಲಾಗುತ್ತಿದೆಯೋ ಅದೇ ರೀತಿ ನಮಗೂ ಆದ್ಯತೆ ನೀಡಬೇಕು” ಎಂದರು.
ಬಜೆಟ್ ಅನ್ಯಾಯದ ಬಗ್ಗೆ ಕೇಳಿದಾಗ, ನಮ್ಮ ರಾಜ್ಯದಿಂದ 26 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಲಾಗಿತ್ತು. ಈಗ 27ನೇಯವರೂ ಸೇರಿಕೊಂಡಿದ್ದಾರೆ. 27 ಸಂಸದರು ಸೇರಿ ನಮ್ಮ ರಾಜ್ಯಕ್ಕೆ ಏನು ತಂದಿದ್ದಾರೆ? ಈಗಲಾದರೂ 27 ಸಂಸದರು ಸಂಸತ್ತಿನ ಮುಂದೆ ಧರಣಿ ಮಾಡಲಿ ಎಂದು ಕೋರುತ್ತೇನೆ ಎಂದು ತಿಳಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…