ಬೆಂಗಳೂರು: ಬಜೆಟ್ನಲ್ಲಿ ಕೊಟ್ಟಿರುವ ಅನುದಾನ ಸುಣ್ಣ-ಬಣ್ಣ ಬಳಿಯಲೂ ಸಾಕಾಗೋಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಎಂ ಯಡಿಯೂರಪ್ಪ ಅವರ ಬಜೆಟ್ ಮಂಡನೆಯನ್ನು ಟೀಕಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಬಜೆಟ್ನ ಎರಡನೇ ಪುಟದಲ್ಲೋ 3ನೇ ಪುಟದಲ್ಲೋ ನರೇಂದ್ರ ಮೋದಿ ಅವರ ಮಾರ್ಗದಲ್ಲಿ ಹೋಗುತ್ತೇವೆ ಎಂದು ಹೇಳಿಕೊಂಡಿದ್ದಾರೆ. ಕೇಂದ್ರದ ಅನುದಾನ ಬರಲ್ಲ, ಅದಕ್ಕೆ ಹೀಗೆ ಬಜೆಟ್ನಲ್ಲಿ ಏನು ಇಲ್ಲ ಎಂದರು.
ನಮ್ಮ ರಾಜ್ಯ ತೆರೆಗೆ ಸಂಗ್ರಹದಲ್ಲಿ ಇಷ್ಟೆಲ್ಲಾ ಬಿಕ್ಕಟ್ಟು ಇದ್ದರೂ ಹಿಂದೆ ಬಿದ್ದಿಲ್ಲ. ಕಳೆದ ಬಾರಿ ನಾವು ಬಜೆಟ್ ಮಂಡನೆ ಮಾಡಿದಾಗ ಏನು ನಿರೀಕ್ಷೆ ಇಟ್ಟುಕೊಂಡಿದ್ದೆವೋ, ಆ ನಿರೀಕ್ಷೆ ಹತ್ತಿರ ಹೋಗಿದ್ದೇವೆ. ಶೇ. 14 ರಷ್ಟು ಹೆಚ್ಚಿನ ತೆರೆಗೆ ಸಂಗ್ರಹ ಕೂಡ ಆಗಿದೆ ಎಂದರು.
ಈಗ ಕೊಟ್ಟಿರುವ ಹಣ ನೋಡಿದರೆ, ಅದರಲ್ಲೂ ಆರೋಗ್ಯ ಇಲಾಖೆಗೆ ಕೊಟ್ಟಿರುವ ಅನುದಾನದಲ್ಲಿ ಸುಣ್ಣ-ಬಣ್ಣ ಬಳಿಯಲು ಸಾಧ್ಯವಿಲ್ಲ. ಬಜೆಟ್ನಲ್ಲಿ ಯಾವುದು ಸ್ಪಷ್ಟನೆ ಆಗಿಲ್ಲ. ನಮ್ಮ ಯೋಜನೆಯನ್ನು ಈ ಸರ್ಕಾರ ಮುಂದುವರಿಸುವುದಕ್ಕೆ ಸಾಧ್ಯನೆ ಇಲ್ಲ. ಹೀಗಾಗಿ ಈ ಸರ್ಕಾರ ಜನರಿಗೆ ಯಾವುದೇ ರೀತಿಯ ಸ್ಪಷ್ಟನೆ ಕೊಡಲು ಸಾಧ್ಯವಾಗಿಲ್ಲ ಎಂದು ಕುಮಾರಸ್ವಾಮಿ ಬಜೆಟ್ ಅನ್ನು ಟೀಕಿಸಿದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…