Featured

ಬಜೆಟ್ ನಲ್ಲಿ ಮುಸ್ಲಿಮರಿಗೆ ಮೀಸಲಾತಿ  : ಸರ್ಕಾರದ ಹಿಂದೂ ವಿರೋಧಿ ನೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ : ಸುನಿಲ್‌ ಕುಮಾರ್‌ ಆಕ್ರೋಶ – vishwanews24

ಬಜೆಟ್ ನಲ್ಲಿ ಮುಸ್ಲಿಮರಿಗೆ ಮೀಸಲಾತಿ  : ಸರ್ಕಾರದ ಹಿಂದೂ ವಿರೋಧಿ ನೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ : ಸುನಿಲ್‌ ಕುಮಾರ್‌ ಆಕ್ರೋಶ

ಬೆಂಗಳೂರು: ಇಷ್ಟು ದಿ‌ನ ಮುಸ್ಲಿಮರಿಗೆ ತೆರೆಮರೆಯಲ್ಲಿ ವಿಶೇಷ ಆದ್ಯತೆ ನೀಡುತ್ತಿದ್ದ ಸಿದ್ದರಾಮಯ್ಯ  ಈಗ ಅದನ್ನು ಬಜೆಟ್‌ಗೂ ವಿಸ್ತರಿಸಿದ್ದಾರೆ. ಹಣಕಾಸು ತಜ್ಞರ ಒಡೆದಾಳುವ ಆರ್ಥಿಕತೆ ಎಂದು ಕಾರ್ಕಳ ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಹೊರ ಹಾಕಿದ್ದಾರೆ.

ಸರ್ಕಾರಿ ಕಾಮಗಾರಿಗಳಲ್ಲಿ 2 ಕೋಟಿ ರೂ.ವರೆಗಿನ ಗುತ್ತಿಗೆ ಮತ್ತು 1 ಕೋಟಿ ರೂ.ವರೆಗಿನ ಖರೀದಿಯಲ್ಲಿ ಮುಸ್ಲಿಂ ಮೀಸಲಾತಿ ಕಲ್ಪಿಸುವುದಾಗಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದೆ. ಸರ್ಕಾರದ ಹಿಂದೂ ವಿರೋಧಿ ನೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ ಎಂದು ಪ್ರಶ್ನಿಸಿದ್ದಾರೆ.

ಕಡುಬು ತಿನ್ನುವುದು ಕಹಿ ನೀರು ಕುಡಿಯುವುದು. ರಾಜ್ಯವನ್ನು 1,16,000 ಕೋಟಿ ರೂ. ಸಾಲದ ಶೂಲಕ್ಕೆ ದೂಡಿರುವ ಸಿದ್ದರಾಮಯ್ಯನವರ ಹದಿನಾರನೇ ಬಜೆಟ್ ಕರ್ನಾಟಕವನ್ನು ಅಕ್ಷರಶಃ ಆರ್ಥಿಕ ದುಸ್ಥಿತಿಗೆ ದೂಡಲಿದೆ ಎಂದು ಕಿಡಿಕಾರಿದ್ದಾರೆ.

ಬಜೆಟ್ ಎನ್ನುವುದು ನನ್ನ ದೃಷ್ಟಿಯಲ್ಲಿ ಕೇವಲ ಬಿಳಿಹಾಳೆಯಲ್ಲ ಎಂದು ವ್ಯಾಖ್ಯಾನಿಸಿರುವ ಸಿದ್ದರಾಮಯ್ಯನವರು ಶಾಶ್ವತ ಯೋಜನೆಗಳತ್ತ ಗಮನ ಹರಿಸಿಲ್ಲ. ಕರಾವಳಿ ಭಾಗದ ಜಿಲ್ಲೆಗಳಿಗಂತೂ ಯಾವುದೇ ಕೊಡುಗೆ ಇಲ್ಲ. ಮಂಗಳೂರಿನಿಂದ ಕಾರವಾರದವರೆಗಿನ ಕೊಂಕಣ ರೈಲ್ವೆ ಯೋಜನೆಗೆ ಸರ್ಕಾರ ನೆರವಿನ ಹಸ್ತ ಚಾಚಿಲ್ಲ ಎಂದು ದೂರಿದ್ದಾರೆ.

ಆಕರ್ಷಣೀಯ ಘೋಷಣೆಗಳು, ಕವಿವಾಣಿಯ ಉಲ್ಲೇಖದಲ್ಲೇ ಬಜೆಟ್ ಪುಸ್ತಕ ತುಂಬಿದ್ದು, ಶಿಕ್ಷಣ, ಆರೋಗ್ಯ, ಜಲಸಂನ್ಮೂಲ, ಗ್ರಾಮೀಣಾಭಿವೃದ್ಧಿ ಯೋಜನೆಗಳ ಆಮೂಲಾಗ್ರ ಅಭಿವೃದ್ಧಿಗೆ ಯಾವುದೇ ಕೊಡುಗೆ ಇಲ್ಲ ಎಂದು ಸಿಟ್ಟು ಹೊರಹಾಕಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago