ಬಜೆಟ್: ರೈತರಿಗಾಗಿ 16 ಅಂಶಗಳ ಕ್ರಿಯಾ ಯೋಜನೆಗಳ ಘೋಷಣೆ -Vishwanews24

ನವದೆಹಲಿ: ಸಂಸತ್ ನಲ್ಲಿ ಇಂದು 2020ನೇ ಸಾಲಿನ ಬಜೆಟ್ ಭಾಷಣ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ರೈತರಿಗಾಗಿ 16 ಅಂಶಗಳ ಕ್ರಿಯಾ ಯೋಜನೆಯನ್ನು ಘೋಷಣೆ ಮಾಡಿದರು.

1. ಮಾದರಿ ಕೃಷಿ ನಿಯಮಾವಳಿ ಅಳವಡಿಸಿಕೊಳ್ಳಲು ರಾಜ್ಯಗಳಿಗೆ ಪ್ರೋತ್ಸಾಹ
2. ನೀರಿನ ತೀವ್ರ ಅಭಾವ ಎದುರಿಸುತ್ತಿರುವ 100 ಜಿಲ್ಲೆಗಳಲ್ಲಿ ಪರಿಣಾಮಕಾರಿ ಸಮಗ್ರ ಕ್ರಮ
3. ಪ್ರಧಾನ ಮಂತ್ರಿ ಕುಸುಮ್ ಯೋಜನೆ ಸೀಮೆಎಣ್ಣೆ ಮೇಲಿನ ಅವಲಂಬನೆಯನ್ನು ತೆಗೆದುಹಾಕುತ್ತದೆ ಮತ್ತು ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸುತ್ತದೆ
4. ನಮ್ಮ ಸರ್ಕಾರ ರಸಗೊಬ್ಬರ ಬಳಕೆಯನ್ನು ಉತ್ತೇಜಿಸುತ್ತದೆ. ಆದರೆ ಪ್ರಸ್ತುತ ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚಾಗಿರುವ ಈ ಸಮಯದಲ್ಲಿ ಸರ್ಕಾರದ ಈ ಕ್ರಮ ಅತ್ಯಂತ ಪ್ರಮುಖವಾಗುತ್ತದೆ.
5. ನಾಬಾರ್ಡ್ ಯೋಜನೆ ಕೃಷಿ ಗೋದಾಮುಗಳು, ಕೋಲ್ಡ್ ಸ್ಟೋರೇಜ್ ಮತ್ತು ಇತರ ದಾಸ್ತಾನು ಸಂಗ್ರಹಣೆಗಳನ್ನು ಮ್ಯಾಪಿಂಗ್ ಮತ್ತು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಮಾಡುತ್ತದೆ.
6. ಗ್ರಾಮೀಣ ಸ್ಟೋರೇಜ್ ಯೋಜನೆಗಳನ್ನು ಎಸ್ಎಚ್ಇಗಳು ನಿರ್ವಹಣೆ ಮಾಡಲು ಉದ್ದೇಶಿಸಲಾಗಿದೆ. ಇದರಿಂದ ರೈತರು ಹೆಚ್ಚಿನ ಪ್ರಮಾಣದ ಉತ್ಪಾದನೆಗಳನ್ನು ಸಂಗ್ರಹಿಸಲು ನೆರವಾಗುತ್ತದೆ. ಅಲ್ಲದೆ ರೈತರ ಲಾಜಿಸ್ಚಿಕ್ ವೆಚ್ಚವನ್ನು ಇದು ಕಡಿಮೆ ಮಾಡಲು ನೆರವಾಗುತ್ತದೆ. ಅಂತೆಯೇ ತಡೆರಹಿತ ಶೇಖರಣಾ ಕಾರ್ಯ ವಿಧಾನವನ್ನು ನಿರ್ವಹಿಸುವ ಜವಾಬ್ದಾರಿ ಗ್ರಾಮದ ಮಹಿಳೆಯರ ಮೇಲಿರುತ್ತದೆ.
7. ರೈತರಿಗೆ ನೆರವಾಗಲೆಂದು ವಿಶೇಷ ರೆಫ್ರಿಜರೇಟೆಡ್ ರೈಲುಗಳ ಘೋಷಣೆ. ಕೃಷಿ ಉಡಾನ್ ಮೂಲಕ ಕೃಷಿ ಉತ್ಪನ್ನಗಳ ರಫ್ತಿಗೆ ವಿಶೇಷ ಸರಕು ಸಾಗಣೆ ವಿಮಾನಗಳು. ಕೃಷಿ ಉಡಾನ್ ಯೋಜನೆಯನ್ನು ಏವಿಯೇಷನ್ ಸಚಿವಾಲಯ ಆರಂಭಿಸಲಿದೆ.
8. ಗ್ರಾಮೀಣ ನಿರುದ್ಯೋಗಿಗಳಿಗೆ ಉದ್ಯೋಗ, ಉದ್ಯೋಗ ಖಾತ್ರಿ ಯೋಜನೆಗೆ ಬಲತುಂಬುವ ಭರವಸೆ
9. ಬರಡು ಭೂಮಿಯಲ್ಲಿ ಸೋಲಾರ್‌ ಯೋಜನೆ
10. ಸಾವಯವ ಉತ್ಪನ್ನಗಳ ಆನ್‌ಲೈನ್ ಮರಾಟ
11. 2025ರ ವೇಳೆಗೆ ಹಾಲು ಉತ್ಪಾದನೆಯನ್ನು 53.5 ಟನ್‌ನಿಂದ 108 ಟನ್‌ಗೆ ಹೆಚ್ಚಿಸುವ ಗುರಿ.
12. ತೋಟಗಾರಿಕೆ ವಲಯದಲ್ಲೂ ಆಹಾರ ಧಾನ್ಯಗಳ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ನಾವು ಇದನ್ನು ಒಂದು ಪದಾರ್ಥ, ಒಂದು ಜಿಲ್ಲೆಯಡಿಗೆ ತರಲು ಯೋಜಿಸಿದ್ದೇವೆ.
13. ಗೋದಾಮುಗಳು ಹಣಕಾಸು ಇತರೆ ಸೇವೆಗಳನ್ನು ಇ ಸೇವೆಗಳಡಿಗೆ ತರುವುದು
14. 2021 ರ ಕೃಷಿ ಸಾಲ ಲಭ್ಯತೆಯನ್ನು 15 ಲಕ್ಷ ಕೋಟಿಗೆ ಏರಿಕೆ ಮಾಡಲಾಗುತ್ತದೆ.
15. 2025ರ ವೇಳೆಗೆ ರಾಸುಗಳಲ್ಲಿ ಕಾಲುಬಾಯಿ ರೋಗ, ಕುರಿ ಮತ್ತು ಮೇಕೆಗಳಲ್ಲಿ ಪಿಪಿಪಿ ಕಾಯಿಲೆ ಮುಕ್ತ ಭಾರತದ ಘೋಷಣೆ
16.ಸಾಗರ್ ಮಿತ್ರ ಯೋಜನೆ ಮೂಲಕ ಮೀನುಗಾರಿಕೆಯಲ್ಲಿ ಹೆಚ್ಚೆಚ್ಚು ಯುವಕರ ಪಾಲ್ಗೊಳ್ಳುವಿಕೆ ಹೆಚ್ಚಳಕೆ ಕ್ರಮ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago