ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಸೋಮವಾರ ಮಂಡಿಸಿದ ಬಜೆಟ್ ಸಂಪೂರ್ಣ ಗೊತ್ತು ಗುರಿಯಿಲ್ಲದ ಬಜೆಟ್ ಆಗಿದ್ದು, ಕರ್ನಾಟಕವನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯಿಸಿದ್ದಾರೆ.
ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗಿಲ್ಲ. ಸರಕಾರಿ ಸೌಮ್ಯದ ಸಂಸ್ಥೆಗಳಿಂದ ಬಂಡವಾಳ ಹಿಂತೆಗೆತದೊಂದಿಗೆ ಖಾಸಗೀಕರಣಕ್ಕೆ ಒತ್ತು. ಸಣ್ಣ ಉದ್ಯಮ ಪುನಶ್ಚೇತನ ಮಾಡುವಲ್ಲಿ ಯಾವುದೇ ಕಾರ್ಯಕ್ರಮವಿಲ್ಲದೆ ವಿಫಲ. ರೈತರಿಗೆ ಯಾವುದೇ ಹೊಸ ಯೋಜನೆಗಳಿಲ್ಲ. ಕರ್ನಾಟಕವನ್ನು ಕಡೆಗಣಿಸಿ ಚುನಾವಣೆ ಇರುವ ರಾಜ್ಯಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಉತ್ಪಾದನಾ ಕ್ಷೇತ್ರಕ್ಕೆ ಯಾವುದೇ ಒತ್ತು ನೀಡದೆ ನಿರುದ್ಯೋಗ ಸಮಸ್ಯೆ ಇನ್ನೂ ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್ಗಳಿಗೆ ಕೃಷಿ ಸೆಸ್ ಹೇರಿಕೆಯ ಮೂಲಕ ಜನ ಸಾಮಾನ್ಯರಿಗೆ ಇನ್ನೂ ಬೆಲೆ ಏರಿಕೆಯ ಹೊರೆ. ಕೋವಿಡ್-19 ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಬಜೆಟ್ನಲ್ಲಿ ಯಾವುದೇ ಯೋಜನೆ ಹಾಕಿಕೊಂಡಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…