ಬೆಂಗಳೂರು: ಬಡಗುತಿಟ್ಟು ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಇಹಲೋಕದ ತಿರುಗಾಟ ನಿಲ್ಲಿಸಿದ್ದಾರೆ. ಕಂಚಿನ ಕಂಠದ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಪುತ್ರನ ಮನೆಯಲ್ಲಿ ಇಂದು ಬೆಳಗ್ಗೆ 4:30ರ ವೇಳೆಗೆ ಧಾರೇಶ್ವರ ನಿಧನರಾದರು. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳಕ್ಕೆ ನಿವೃತ್ತಿ ಹೇಳಿದ್ದರು.
ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು.
1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು
ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು.
ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…