ಉಡುಪಿ

ಬಡಗುತಿಟ್ಟು ಯಕ್ಷಗಾನ  ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ – Vishwanews24

ಬಡಗುತಿಟ್ಟು ಯಕ್ಷಗಾನ  ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಬೆಂಗಳೂರು: ಬಡಗುತಿಟ್ಟು ಯಕ್ಷಗಾನದ  ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಇಹಲೋಕದ ತಿರುಗಾಟ ನಿಲ್ಲಿಸಿದ್ದಾರೆ. ಕಂಚಿನ ಕಂಠದ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಬೆಂಗಳೂರಿನ ಪುತ್ರನ ಮನೆಯಲ್ಲಿ ಇಂದು ಬೆಳಗ್ಗೆ 4:30ರ ವೇಳೆಗೆ ಧಾರೇಶ್ವರ ನಿಧನರಾದರು. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳಕ್ಕೆ ನಿವೃತ್ತಿ ಹೇಳಿದ್ದರು.

ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ  ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು.

1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು

ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು.

ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

13 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

13 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

15 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

15 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

16 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

16 hours ago