ಉಡುಪಿ: ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಬಡಜನರು ಬದುಕು ಕಟ್ಟಿಕೊಳ್ಳಲು ಅನುಕೂಲ ಆಗಿದೆ. ಪಂಚ ಗ್ಯಾರಂಟಿ ಯೋಜನೆಯಿಂದ ಜನರ ಖರೀದಿ ಸಾಮರ್ಥ್ಯ ಕೂಡ ಹೆಚ್ಚಾಗಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಮಂಡಿಸಿರುವ 4.9 ಲಕ್ಷ ಕೋಟಿ ರೂ. ಬಜೆಟ್ ನಲ್ಲಿ 1 ಲಕ್ಷ ಕೋಟಿ ರೂ. ಗ್ಯಾರಂಟಿ ಯೋಜನೆ ಸಹಿತ ವಿವಿಧ ಯೋಜನೆಗಳ ಮೂಲಕ ಜನರಿಗೆ ವರ್ಗಾವಣೆ ಆಗುತ್ತಿದೆ. ಇದರಿಂದ ಜನರ ಖರೀದಿ ಸಾಮರ್ಥ್ಯ ಹೆಚ್ಚಳವಾಗಿದೆ. ಅಲ್ಲದೆ, ರಾಜ್ಯದ ಜನರ ತಲಾ ಆದಾಯ ಕೂಡ ಹೆಚ್ಚಳವಾಗಿದ್ದು, 2024–25ನೇ ಸಾಲಿನಲ್ಲಿ ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ ಎಂದರು.
ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿ ಆಗುತ್ತದೆ. ಬಿಟ್ಟಿ ಭಾಗ್ಯದಿಂದ ಜನರು ಸೋಮಾರಿ ಆಗುತ್ತಾರೆ ಅಂತಾ ಬಿಜೆಪಿ ಟೀಕೆ ಮಾಡಿತ್ತು. ಆದರೆ ಈಗ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿಯೇ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಕಾಪು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ ಸುಕುಮಾರ್ ಉಪಸ್ಥಿತರಿದ್ದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…