ಆಲಿಗಢ: ಇಂದು ರಾಷ್ಟ್ರವು ಧರ್ಮವು ಹೊರತಾದ ಹಾದಿಯಲ್ಲಿದ್ದು, ಜನರ ಸಾಂವಿಧಾನಿಕ ಹಕ್ಕುಗಳು ಮತ್ತು ಅವರ ಭವಿಷ್ಯ ಹಾಗೂ ಯಾವುದೇ ಸಮುದಾಯಗಳು ಹಿಂದೆ ಉಳಿದಿಲ್ಲ ಎಂದು ಭರವಸೆ ನೀಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.
ಆಲಿಗಢ ಮುಸ್ಲಿಂ ಯೂನಿವರ್ಸಿಟಿ ಶತಮಾನೋತ್ಸವ ಸಂಭ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಡವರಿಗಾಗಿ ಇರುವ ನಮ್ಮ ಸರ್ಕಾರದ ಯೋಜನೆಗಳು ಎಲ್ಲ ವರ್ಗಗಳನ್ನು ಯಾವುದೇ ಧರ್ಮದ ಆಧಾರವಿಲ್ಲದೆ ತಲುಪುತ್ತಿದೆ. ರಾಷ್ಟ್ರದ ಏಳಿಗೆ ಮತ್ತು ಅಭಿವೃದ್ಧಿ ವಿಚಾರ ಬಂದಾಗ ನಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಪಕ್ಕಕ್ಕಿಟ್ಟು ಅಭಿವೃದ್ಧಿಯೆಡೆಗೆ ಗಮನ ನೀಡುತ್ತೇವೆಂಬ ಭರವಸೆ ನೀಡಿದರು.
ಯಾವುದೇ ಪಕ್ಷಪಾತವಿಲ್ಲದೆ ದೇಶದ ಎಲ್ಲಾ ನಾಗರಿಕರು ಅನುಕೂಲವನ್ನು ಪಡೆಯುವ ಹಾದಿಯಲ್ಲಿ ಇಂದು ದೇಶವಿದೆ. ಧರ್ಮ ಕಾರಣದಿಂದ ಯಾರೊಬ್ಬರು ಸಹ ಹಿಂದೆ ಉಳಿಯದ ಹಾದಿಯಲ್ಲಿ ನಾವಿದ್ದೇವೆ. ಎಲ್ಲರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ದೇಶ ಮುನ್ನಡೆಯುತ್ತಿದೆ ಎಂದು ಪ್ರಧಾನಿ ಹೇಳಿದರು.
ನಾವು ಯಾವುದೇ ಧರ್ಮದಲ್ಲಿ ಜನಿಸಿರಲಿ, ರಾಷ್ಟ್ರೀಯ ಗುರಿಗಳೊಂದಿಗೆ ನಮ್ಮ ಆಸೆಗಳನ್ನು ಯಾವ ರೀತಿ ಹೊಂದಿಸುತ್ತೇವೆ ಎಂಬುದು ಮುಖ್ಯವಾಗಿದೆ. ಸಮಾಜದಲ್ಲಿ ಸೈದ್ಧಾಂತಿಕ ಭಾಗಗಳಿರಬಹುದು ಆದರೆ, ಅಭಿವೃದ್ಧಿ ಅಂತ ಬಂದಾಗ ಎಲ್ಲವೂ ಕೂಡ ಅಧೀನವಾಗಿ ಉಳಿಯುತ್ತದೆ. ರಾಷ್ಟ್ರ ಅಂತಾ ಬಂದಾಗ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಮಾತಿಲ್ಲ ಎಂದು ಪ್ರಧಾನಿ ತಿಳಿಸಿದರು.
ಎಎಮ್ಯು ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು ಸೃಷ್ಟಿಸಿದೆ. ಹೀಗಾಗಿಯೇ ನಾನಿಂದು ಇಲ್ಲಿಗೆ ಬಂದಿದ್ದೇನೆ. ಹೋರಾಟಗಾರರಲ್ಲಿಯೂ ಸೈದ್ಧಾಂತಿಕ ಭಿನ್ನಾಭಿಪ್ರಾಯವಿದ್ದರೂ ಸಹ ಸ್ವಾತಂತ್ರ್ಯಕ್ಕಾಗಿ ಎಲ್ಲರೂ ಒಗ್ಗೂಡಿದರು. ಸ್ವಾತಂತ್ರ್ಯ ಅವರನ್ನು ಒಂದುಗೂಡಿಸಿತು. ಹೀಗಾಗಿ ನಾವೆಲ್ಲ ಒಟ್ಟಾಗಿ ನವ ಭಾರತಕ್ಕಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…