Featured

ಬಡವರಿಗಾಗಿ ಇರುವ ನಮ್ಮ ಸರ್ಕಾರದ ಯೋಜನೆಗಳು ಎಲ್ಲ ವರ್ಗಗಳನ್ನು ಯಾವುದೇ ಧರ್ಮದ ಆಧಾರವಿಲ್ಲದೆ ತಲುಪುತ್ತಿದೆ : ಪ್ರಧಾನಿ  ಮೋದಿ -Vishwanews24

ಬಡವರಿಗಾಗಿ ಇರುವ ನಮ್ಮ ಸರ್ಕಾರದ ಯೋಜನೆಗಳು ಎಲ್ಲ ವರ್ಗಗಳನ್ನು ಯಾವುದೇ ಧರ್ಮದ ಆಧಾರವಿಲ್ಲದೆ ತಲುಪುತ್ತಿದೆ : ಪ್ರಧಾನಿ  ಮೋದಿ -Vishwanews24

ಆಲಿಗಢ: ಇಂದು ರಾಷ್ಟ್ರವು ಧರ್ಮವು ಹೊರತಾದ ಹಾದಿಯಲ್ಲಿದ್ದು, ಜನರ ಸಾಂವಿಧಾನಿಕ ಹಕ್ಕುಗಳು ಮತ್ತು ಅವರ ಭವಿಷ್ಯ ಹಾಗೂ ಯಾವುದೇ ಸಮುದಾಯಗಳು ಹಿಂದೆ ಉಳಿದಿಲ್ಲ ಎಂದು ಭರವಸೆ ನೀಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.

ಆಲಿಗಢ ಮುಸ್ಲಿಂ ಯೂನಿವರ್ಸಿಟಿ ಶತಮಾನೋತ್ಸವ ಸಂಭ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಡವರಿಗಾಗಿ ಇರುವ ನಮ್ಮ ಸರ್ಕಾರದ ಯೋಜನೆಗಳು ಎಲ್ಲ ವರ್ಗಗಳನ್ನು ಯಾವುದೇ ಧರ್ಮದ ಆಧಾರವಿಲ್ಲದೆ ತಲುಪುತ್ತಿದೆ. ರಾಷ್ಟ್ರದ ಏಳಿಗೆ ಮತ್ತು ಅಭಿವೃದ್ಧಿ ವಿಚಾರ ಬಂದಾಗ ನಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಪಕ್ಕಕ್ಕಿಟ್ಟು ಅಭಿವೃದ್ಧಿಯೆಡೆಗೆ ಗಮನ ನೀಡುತ್ತೇವೆಂಬ ಭರವಸೆ ನೀಡಿದರು.

ಯಾವುದೇ ಪಕ್ಷಪಾತವಿಲ್ಲದೆ ದೇಶದ ಎಲ್ಲಾ ನಾಗರಿಕರು ಅನುಕೂಲವನ್ನು ಪಡೆಯುವ ಹಾದಿಯಲ್ಲಿ ಇಂದು ದೇಶವಿದೆ. ಧರ್ಮ ಕಾರಣದಿಂದ ಯಾರೊಬ್ಬರು ಸಹ ಹಿಂದೆ ಉಳಿಯದ ಹಾದಿಯಲ್ಲಿ ನಾವಿದ್ದೇವೆ. ಎಲ್ಲರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ದೇಶ ಮುನ್ನಡೆಯುತ್ತಿದೆ ಎಂದು ಪ್ರಧಾನಿ ಹೇಳಿದರು.

ನಾವು ಯಾವುದೇ ಧರ್ಮದಲ್ಲಿ ಜನಿಸಿರಲಿ, ರಾಷ್ಟ್ರೀಯ ಗುರಿಗಳೊಂದಿಗೆ ನಮ್ಮ ಆಸೆಗಳನ್ನು ಯಾವ ರೀತಿ ಹೊಂದಿಸುತ್ತೇವೆ ಎಂಬುದು ಮುಖ್ಯವಾಗಿದೆ. ಸಮಾಜದಲ್ಲಿ ಸೈದ್ಧಾಂತಿಕ ಭಾಗಗಳಿರಬಹುದು ಆದರೆ, ಅಭಿವೃದ್ಧಿ ಅಂತ ಬಂದಾಗ ಎಲ್ಲವೂ ಕೂಡ ಅಧೀನವಾಗಿ ಉಳಿಯುತ್ತದೆ. ರಾಷ್ಟ್ರ ಅಂತಾ ಬಂದಾಗ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಮಾತಿಲ್ಲ ಎಂದು ಪ್ರಧಾನಿ ತಿಳಿಸಿದರು.

ಎಎಮ್​ಯು ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು ಸೃಷ್ಟಿಸಿದೆ. ಹೀಗಾಗಿಯೇ ನಾನಿಂದು ಇಲ್ಲಿಗೆ ಬಂದಿದ್ದೇನೆ. ಹೋರಾಟಗಾರರಲ್ಲಿಯೂ ಸೈದ್ಧಾಂತಿಕ ಭಿನ್ನಾಭಿಪ್ರಾಯವಿದ್ದರೂ ಸಹ ಸ್ವಾತಂತ್ರ್ಯಕ್ಕಾಗಿ ಎಲ್ಲರೂ ಒಗ್ಗೂಡಿದರು. ಸ್ವಾತಂತ್ರ್ಯ ಅವರನ್ನು ಒಂದುಗೂಡಿಸಿತು. ಹೀಗಾಗಿ ನಾವೆಲ್ಲ ಒಟ್ಟಾಗಿ ನವ ಭಾರತಕ್ಕಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago