ಆಲಿಗಢ: ಇಂದು ರಾಷ್ಟ್ರವು ಧರ್ಮವು ಹೊರತಾದ ಹಾದಿಯಲ್ಲಿದ್ದು, ಜನರ ಸಾಂವಿಧಾನಿಕ ಹಕ್ಕುಗಳು ಮತ್ತು ಅವರ ಭವಿಷ್ಯ ಹಾಗೂ ಯಾವುದೇ ಸಮುದಾಯಗಳು ಹಿಂದೆ ಉಳಿದಿಲ್ಲ ಎಂದು ಭರವಸೆ ನೀಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.
ಆಲಿಗಢ ಮುಸ್ಲಿಂ ಯೂನಿವರ್ಸಿಟಿ ಶತಮಾನೋತ್ಸವ ಸಂಭ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಡವರಿಗಾಗಿ ಇರುವ ನಮ್ಮ ಸರ್ಕಾರದ ಯೋಜನೆಗಳು ಎಲ್ಲ ವರ್ಗಗಳನ್ನು ಯಾವುದೇ ಧರ್ಮದ ಆಧಾರವಿಲ್ಲದೆ ತಲುಪುತ್ತಿದೆ. ರಾಷ್ಟ್ರದ ಏಳಿಗೆ ಮತ್ತು ಅಭಿವೃದ್ಧಿ ವಿಚಾರ ಬಂದಾಗ ನಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಪಕ್ಕಕ್ಕಿಟ್ಟು ಅಭಿವೃದ್ಧಿಯೆಡೆಗೆ ಗಮನ ನೀಡುತ್ತೇವೆಂಬ ಭರವಸೆ ನೀಡಿದರು.
ಯಾವುದೇ ಪಕ್ಷಪಾತವಿಲ್ಲದೆ ದೇಶದ ಎಲ್ಲಾ ನಾಗರಿಕರು ಅನುಕೂಲವನ್ನು ಪಡೆಯುವ ಹಾದಿಯಲ್ಲಿ ಇಂದು ದೇಶವಿದೆ. ಧರ್ಮ ಕಾರಣದಿಂದ ಯಾರೊಬ್ಬರು ಸಹ ಹಿಂದೆ ಉಳಿಯದ ಹಾದಿಯಲ್ಲಿ ನಾವಿದ್ದೇವೆ. ಎಲ್ಲರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ದೇಶ ಮುನ್ನಡೆಯುತ್ತಿದೆ ಎಂದು ಪ್ರಧಾನಿ ಹೇಳಿದರು.
ನಾವು ಯಾವುದೇ ಧರ್ಮದಲ್ಲಿ ಜನಿಸಿರಲಿ, ರಾಷ್ಟ್ರೀಯ ಗುರಿಗಳೊಂದಿಗೆ ನಮ್ಮ ಆಸೆಗಳನ್ನು ಯಾವ ರೀತಿ ಹೊಂದಿಸುತ್ತೇವೆ ಎಂಬುದು ಮುಖ್ಯವಾಗಿದೆ. ಸಮಾಜದಲ್ಲಿ ಸೈದ್ಧಾಂತಿಕ ಭಾಗಗಳಿರಬಹುದು ಆದರೆ, ಅಭಿವೃದ್ಧಿ ಅಂತ ಬಂದಾಗ ಎಲ್ಲವೂ ಕೂಡ ಅಧೀನವಾಗಿ ಉಳಿಯುತ್ತದೆ. ರಾಷ್ಟ್ರ ಅಂತಾ ಬಂದಾಗ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಮಾತಿಲ್ಲ ಎಂದು ಪ್ರಧಾನಿ ತಿಳಿಸಿದರು.
ಎಎಮ್ಯು ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು ಸೃಷ್ಟಿಸಿದೆ. ಹೀಗಾಗಿಯೇ ನಾನಿಂದು ಇಲ್ಲಿಗೆ ಬಂದಿದ್ದೇನೆ. ಹೋರಾಟಗಾರರಲ್ಲಿಯೂ ಸೈದ್ಧಾಂತಿಕ ಭಿನ್ನಾಭಿಪ್ರಾಯವಿದ್ದರೂ ಸಹ ಸ್ವಾತಂತ್ರ್ಯಕ್ಕಾಗಿ ಎಲ್ಲರೂ ಒಗ್ಗೂಡಿದರು. ಸ್ವಾತಂತ್ರ್ಯ ಅವರನ್ನು ಒಂದುಗೂಡಿಸಿತು. ಹೀಗಾಗಿ ನಾವೆಲ್ಲ ಒಟ್ಟಾಗಿ ನವ ಭಾರತಕ್ಕಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…