Featured

ಬಡವರಿಗೆ ಮನೆ ಮತ್ತು 94ಸಿ/ಸಿಸಿ ಹಕ್ಕು ಪತ್ರ ವಿತರಣೆ ಕಾರ್ಯ ಚುರುಕುಗೊಳಿಸಲು ಕಾಪುವಿನಲ್ಲಿ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ : vishwanews24

ಬಡವರಿಗೆ ಮನೆ ಮತ್ತು 94ಸಿ/ಸಿಸಿ ಹಕ್ಕು ಪತ್ರ ವಿತರಣೆ ಕಾರ್ಯ ಚುರುಕುಗೊಳಿಸಲು ಕಾಪುವಿನಲ್ಲಿ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ : vishwanews24

ಕಾಪು: ಕಾಪು ತಾಲ್ಲೂಕು ವ್ಯಾಪ್ತಿಯಲ್ಲಿ ಮನೆ ನಿವೇಶನ ಕೋರಿ ಸಲ್ಲಿಸಿರುವ ಅರ್ಜಿಗಳ ಮಂಜುರಾತಿ ಮತ್ತು ಮಂಜೂರಾದ ನಿವೇಶನಗಳಿಗೆ ಹಕ್ಕು ಪತ್ರ ನೀಡಬೇಕು ಹಾಗೂ ಕಳೆದ ನಾಲ್ಕು ವರ್ಷದ ಬಿಜೆಪಿ ಅವಧಿಯಲ್ಲಿ ಕಾಪುವಿನಲ್ಲಿ ಸ್ಥಗಿತಗೊಂಡಿರುವ ಹಕ್ಕು ಪತ್ರ. 94ಸಿ.ಸಿಸಿ ವಿತರಣೆ ಕಾರ್ಯವನ್ನು ಚುರುಕುಗೊಳಿಸಲು ಕ್ರಮಕೈಗೊಳ್ಳಬೇಕು ಮತ್ತು ಕಾಪು ತಾಕೂಕಿನ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ತುಪ್ಪೆಪಾದ ಬಳಿ ಸರಕಾರಿ ಜಮೀನಿನಲ್ಲಿ ಮನೆಕಟ್ಟಿಕೊಂಡು ವಾಸವಿದ್ದ ಬಡ ದಲಿತ ಮಹಿಳೆ ಪದ್ಮಬಾಯಿ ಎಂಬವರ ಮನೆಯನ್ನು ನೆಲಸಮ ಮಾಡಿದ ಅಧಿಕಾರಗಳ ವಿರುದ್ದ ಕ್ರಮ‌ಜರಗಿಸುವಂತೆ ಆಗ್ರಹಿಸಿ ಕಾಪುವಿನ ಮಾಜಿ ಶಾಸಕ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಪು ತಹಾಶಿಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ” ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡುವುದು ಮಾತ್ರವಲ್ಲದೆ ಜನ ಸಮಾನ್ಯರಿಗೆ ಸಮಾಜಯಿಷಿ ನೀಡುತ್ತಿದೆ,ನಾಲ್ಕು ವರ್ಷದಿಂದ ಬಡ ರೈತರ ಸಾಲ ಮನ್ನಾ ಮಾಡದೆ ಉದ್ಯಮಿಗಳ‌ಸಾಲ ಮನ್ನಾ ಮಾಡುತ್ತಿದೆ ,ರಸ್ತೆಯಲ್ಲಿ ಮಲಗುತ್ತಿರುವ,ಬಾಡಿಗೆ ಮನೆಯಲ್ಲಿರುವ ಬಡ ಕುಟುಂಬಗಳಿಗೆ ನೀವೆಶನ ನೀಡದೆ ವಂಚಿಸುತ್ತಿದೆ ಎಂದು ಆರೋಪಿಸಿದರು.

ವಿನಯ್ ಕುಮಾರ್ ಸೊರಕೆ ಮಾತಾಡಿ ” ಶಿರ್ವದ ಬಡ ದಲಿತ ಮಹಿಳೆಗೆ ಆದ ಅನ್ಯಾಯವನ್ನು ಬಿಜೆಪಿ ಬೆಂಬಲಿಸಿ ದಲಿತ ವಿರೋಧ ಧೋರಣೆ ಅನುಸರಿಸುತ್ತಿದೆ ,ಬಡವರಿಗ ಮನೆ ನೀಡದೆ ವಂಚಿಸುತ್ತಿದೆ ಎಂದು ಅಕ್ರೋಶ ಹೊರಹಾಕಿದರು.

ಜಿಲ್ಲಾ ಕಾಂಗ್ರಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು , ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಸುವರ್ಣ,ಉತ್ತರ ಅಧ್ಯಕ್ಷ ಸಂತೋಷ್ ಕುಮಾರ್ ಪಕ್ಕಾಲ್,ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ,ಕಾಪು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ ರಮೀಜ್ ಹುಸೇನ್,ಜಿತೇಂದ್ರ ಪುಟಾರ್ಡೋ,ಶಿವಾಜಿ ಸುವರ್ಣ ಬೆಳ್ಳೆ,ಎಂ.ಪಿ ಮೈದಿನಬ್ಬ , ಹೈಬಾ ಡಿಬ್ಬ ಡಿಸೋಜ,ರಂಜನಿ‌ ಹೆಗ್ಡೆ,ಮಹಮ್ಮದ್ ಫಾರೂಕ್ ಚಂದ್ರನಗರ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago