ಬೆಂಗಳೂರು: ರಾಜ್ಯದಲ್ಲಿ ಬಡವರು ಹಾಗೂ ಜನಸಾಮಾನ್ಯರು 10 ಲ. ರೂ. ವೆಚ್ಚದಲ್ಲಿ ಮನೆ ಕಟ್ಟಲು ಅನುಕೂಲವಾಗುವಂತೆ ಶೀಘ್ರ ನೂತನ ಉಚಿತ ಮರಳು ನೀತಿಯನ್ನು ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಸಿ. ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಳು ಸಮಸೆಯನ್ನು ನೀಗಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಶ್ರಯ ಮನೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾ ಣವಾಗುವ 10 ಲಕ್ಷ ರೂ. ವೆಚ್ಚದ ಮನೆಗೆ 100ರಿಂದ 200 ರೂ. ಗೆ ಟನ್ ಮರಳು ಪೂರೈಕೆ ಮಾಡುವ ಉಚಿತ ಮರಳು ನೀತಿಯನ್ನು ಜಾರಿಗೆ ಮಾಡುತ್ತೇವೆ ಎಂದು ಪ್ರಕಟಿಸಿದರು.
ಇದನ್ನೂ ಓದಿ : ಗ್ರಾಮ ಉಜಾಲಾ ಯೋಜನೆ’ : 10 ರೂ.ಗೆ ಎಲ್.ಇ.ಡಿ. ಬಲ್ಬ್ ಯೋಜನೆಗೆ ಚಾಲನೆ -Vishwanews24
ಬಡವರು ಹೆಚ್ಚಿನ ಹಣ ಭರಿಸಿ ಮನೆ ಕಟ್ಟಲು ಮರಳು ಖರೀದಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸರಕಾರದಿಂದಲೇ ಉಚಿತವಾಗಿ ಮರಳು ಪೂರೈಸುವ ಯೋಜನೆ ಇದೆ ಪ್ರಸ್ತುತ ರಾಜ್ಯದ 193 ಮರಳು ನಿಕ್ಷೇಪ ಪ್ರದೇಶಗಳನ್ನು ಗುರುತಿಸಿ 87 ಬ್ಲಾಕ್ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದರು.
ಕಠಿನ ಕ್ರಮ
ರಾಜ್ಯದ ಬಹುತೇಕ ಕಡೆ ಒಂದೇ ಪರ್ಮಿಟ್ನಲ್ಲಿ ಅನೇಕರು ಕಾನೂನು ಬಾಹಿರವಾಗಿ ಮರಳು ಸಾಗಿಸುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಅನೇಕ ಕಡೆ ಸಭೆಗಳನ್ನು ನಡೆಸಿ ಇದಕ್ಕೆ ಕಡಿವಾಣ ಹಾಕಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ ಎಂದರು. ರಾಜ್ಯದ ಎಲ್ಲ ಕಡೆ ಮರಳಿನ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಕಂದಾಯ, ಅರಣ್ಯ, ಗೃಹ, ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಇಂತಹ ದೂರುಗಳು ಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಏಕಗವಾಕ್ಷಿ ಪದ್ಧತಿಯನ್ನು ಜಾರಿ ಮಾಡುತ್ತಿರುವುದಾಗಿ ತಿಳಿಸಿದರು.
ಇದನ್ನೂ ಓದಿ : ಉಡುಪಿ : ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆಗೆ ಈ ಬಾರಿಯೂ ಮೊದಲನೇ ಸ್ಥಾನ ಬರಲಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…