ಬೆಂಗಳೂರು: ರಾಜ್ಯದಲ್ಲಿ ಬಡವರು ಹಾಗೂ ಜನಸಾಮಾನ್ಯರು 10 ಲ. ರೂ. ವೆಚ್ಚದಲ್ಲಿ ಮನೆ ಕಟ್ಟಲು ಅನುಕೂಲವಾಗುವಂತೆ ಶೀಘ್ರ ನೂತನ ಉಚಿತ ಮರಳು ನೀತಿಯನ್ನು ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಸಿ. ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಳು ಸಮಸೆಯನ್ನು ನೀಗಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಶ್ರಯ ಮನೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾ ಣವಾಗುವ 10 ಲಕ್ಷ ರೂ. ವೆಚ್ಚದ ಮನೆಗೆ 100ರಿಂದ 200 ರೂ. ಗೆ ಟನ್ ಮರಳು ಪೂರೈಕೆ ಮಾಡುವ ಉಚಿತ ಮರಳು ನೀತಿಯನ್ನು ಜಾರಿಗೆ ಮಾಡುತ್ತೇವೆ ಎಂದು ಪ್ರಕಟಿಸಿದರು.
ಇದನ್ನೂ ಓದಿ : ಗ್ರಾಮ ಉಜಾಲಾ ಯೋಜನೆ’ : 10 ರೂ.ಗೆ ಎಲ್.ಇ.ಡಿ. ಬಲ್ಬ್ ಯೋಜನೆಗೆ ಚಾಲನೆ -Vishwanews24
ಬಡವರು ಹೆಚ್ಚಿನ ಹಣ ಭರಿಸಿ ಮನೆ ಕಟ್ಟಲು ಮರಳು ಖರೀದಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸರಕಾರದಿಂದಲೇ ಉಚಿತವಾಗಿ ಮರಳು ಪೂರೈಸುವ ಯೋಜನೆ ಇದೆ ಪ್ರಸ್ತುತ ರಾಜ್ಯದ 193 ಮರಳು ನಿಕ್ಷೇಪ ಪ್ರದೇಶಗಳನ್ನು ಗುರುತಿಸಿ 87 ಬ್ಲಾಕ್ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದರು.
ಕಠಿನ ಕ್ರಮ
ರಾಜ್ಯದ ಬಹುತೇಕ ಕಡೆ ಒಂದೇ ಪರ್ಮಿಟ್ನಲ್ಲಿ ಅನೇಕರು ಕಾನೂನು ಬಾಹಿರವಾಗಿ ಮರಳು ಸಾಗಿಸುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಅನೇಕ ಕಡೆ ಸಭೆಗಳನ್ನು ನಡೆಸಿ ಇದಕ್ಕೆ ಕಡಿವಾಣ ಹಾಕಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ ಎಂದರು. ರಾಜ್ಯದ ಎಲ್ಲ ಕಡೆ ಮರಳಿನ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಕಂದಾಯ, ಅರಣ್ಯ, ಗೃಹ, ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಇಂತಹ ದೂರುಗಳು ಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಏಕಗವಾಕ್ಷಿ ಪದ್ಧತಿಯನ್ನು ಜಾರಿ ಮಾಡುತ್ತಿರುವುದಾಗಿ ತಿಳಿಸಿದರು.
ಇದನ್ನೂ ಓದಿ : ಉಡುಪಿ : ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆಗೆ ಈ ಬಾರಿಯೂ ಮೊದಲನೇ ಸ್ಥಾನ ಬರಲಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…