kaup: ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಐಕಳಬಾವ ಡಾ ದೇವಿಪ್ರಸಾದ್ ಶೆಟ್ಟಿ ಇವರ ನೇತೃತ್ವದಲ್ಲಿ ಕೊರೋನ ಲಾಕ್ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕಿಡಾಗಿರುವ ಸುಮಾರು ಒಂದು ಸಾವಿರ ಕುಟುಂಬಗಳಿಗೆ ದಾನಿಗಳಿಂದ ಸಂಗ್ರಹಿಸಿ ಪಡಿತರ ಕಿಟ್ ವಿತರಿಸಲಾಯಿತು.ಮತ್ತು ಡಾ.ಬಿ.ಆರ್ ಅಂಬೆಡ್ಕರ್ ಜನ್ಮ ದಿನದ ಅಂಗವಾಗಿ ಪರಿಶಿಷ್ಟ ಪಂಗಡದ ಕುಟುಂಬದವರೊAದಿಗೆ ಯುಗಾದಿ ಹಬ್ಬ ಆಚರಿಸಿ ಅವರಿಗೆ ಧನ ಸಹಾಯ ಮತ್ತು ಯುಗಾದಿ ಕಿಟ್ ವಿತರಿಸಿ ಧೈರ್ಯ ತುಂಬುವ ಕಾರ್ಯ ಮಾಡಿದರು.
ಅಕ್ಕಿ ಬೆಲ್ಲ ಸೇರಿದಂತೆ ಸುಮಾರು ಒಂಭತ್ತು ಬಗೆಯ ಸೊತ್ತುಗಳನ್ನು ಖುದ್ದಾಗಿ ಪ್ಯಾಕ್ ಮಾಡಿ ಮನೆಮನೆಗೆ ಮುಟ್ಟಿಸುವ ಕಾರ್ಯ ಮಾಡುತ್ತಿದ್ದಾರೆ.
ಈ ಬಗ್ಗೆ ಮಾತಾಡಿದ ಅವರು” ದೇಶದಲ್ಲಿ ಲಾಕ್ಡೌನ್ ಘೋಷನೆಯಾಗಿರುವ ಹಿನ್ನಲೆಯಲ್ಲಿ ಸುಮಾರು ಕುಟುಂಬಗಳು ಸಂಕಷ್ಟದಲ್ಲಿದೆ ಹಾಗಾಗಿ ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್ ರಾಜೇಂದ್ರ ಕುಮಾರ್, ಬಂಜರ ಪ್ರಕಾಶ್ ಶೆಟ್ಟಿ,ಪುತ್ತಿಗೆ ಶ್ರೀಗಳು ಸೇರಿದಂತೆ ಆತ್ಮೀಯ ಸ್ನೇಹಿತರ ಹಾಗೂ ದಾನಿಗಳ ಸಹಕಾರ ಪಡೆದು ಯಾವುದೇ ದುರುಪಯೋಗವಾಗದಂತೆ ಖುದ್ದಾಗಿ ಉತ್ತಮ ಗುಣ ಮಟ್ಟದ ಪಡಿತರ ಕಿಟ್ ತಯಾರು ಮಾಡಿ ಮನೆಮನೆಗೆ ಮುಟ್ಟಿಸುವ ಕಾರ್ಯ ಮಾಡುತ್ತಿದ್ದೇವೆ, ಪ್ರತಿದಿನ ನೂರು ಮನೆಗೆ ಮುಟ್ಟಿಸುವ ಕೆಲಸ ಆಗುತ್ತಿದೆ ಇದುವರೆಗೆ ಒಂದು ಸಾವಿರಕುಟುಂಬಗಳಗೆ ವಿತರಣೆ ಮಾಡಿದ್ದೇವೆ ಎಂದರು. ದೇಶಕ್ಕೆ ಆವರಿಸಿರುವ ಈ ಮಹಮಾರಿ ದೂರವಾಗಿ ಆದಷ್ಟು ಶೀಘ್ರವಾಗಿ ಹೊಸ ಜೀವನ ನಡೆಸುವಂತಾಗಲಿ, ಇಂತಹ ಸಂಕಷ್ಟದ ಸಮಯದಲ್ಲಿ ಉಳ್ಳವರು ಇಲ್ಲದವರಿಗೆ ಸೇವೆ ಮಾಡುವುದು ಧರ್ಮ ಮತ್ತು ಕರ್ತವ್ಯ ನಾವು ಮಾಡುತ್ತಿರುವುದು ದೇವರ ಕಾರ್ಯ ಎಂದರು.” ಕಿಟ್ ವಿತರಣೆ ಕಾರ್ಯದಲ್ಲಿ ಜಹೀರ್ ಅಹಮ್ಮದ್ ಸೇರಿದಂತೆ ಮೊದಲಾದವರು ಕೈ ಜೋಡಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…