ಬಡವರ ಸಂಕಷ್ಟಕ್ಕೆ ಮಿಡಿದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಒಂದು ಸಾವಿರ ಕುಟುಂಬಗಳಿಗೆ ಪಡಿತರ ನೆರವು vishwanews24: video

 kaup: ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಐಕಳಬಾವ ಡಾ ದೇವಿಪ್ರಸಾದ್ ಶೆಟ್ಟಿ ಇವರ ನೇತೃತ್ವದಲ್ಲಿ ಕೊರೋನ ಲಾಕ್‌ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕಿಡಾಗಿರುವ ಸುಮಾರು ಒಂದು ಸಾವಿರ ಕುಟುಂಬಗಳಿಗೆ ದಾನಿಗಳಿಂದ ಸಂಗ್ರಹಿಸಿ ಪಡಿತರ ಕಿಟ್ ವಿತರಿಸಲಾಯಿತು.ಮತ್ತು ಡಾ.ಬಿ.ಆರ್ ಅಂಬೆಡ್ಕರ್ ಜನ್ಮ ದಿನದ ಅಂಗವಾಗಿ ಪರಿಶಿಷ್ಟ ಪಂಗಡದ ಕುಟುಂಬದವರೊAದಿಗೆ ಯುಗಾದಿ ಹಬ್ಬ ಆಚರಿಸಿ ಅವರಿಗೆ ಧನ ಸಹಾಯ ಮತ್ತು ಯುಗಾದಿ ಕಿಟ್ ವಿತರಿಸಿ ಧೈರ್ಯ ತುಂಬುವ ಕಾರ್ಯ ಮಾಡಿದರು.

ಅಕ್ಕಿ ಬೆಲ್ಲ ಸೇರಿದಂತೆ ಸುಮಾರು ಒಂಭತ್ತು ಬಗೆಯ ಸೊತ್ತುಗಳನ್ನು ಖುದ್ದಾಗಿ ಪ್ಯಾಕ್ ಮಾಡಿ ಮನೆಮನೆಗೆ ಮುಟ್ಟಿಸುವ ಕಾರ್ಯ ಮಾಡುತ್ತಿದ್ದಾರೆ.

ಈ ಬಗ್ಗೆ ಮಾತಾಡಿದ ಅವರು” ದೇಶದಲ್ಲಿ ಲಾಕ್‌ಡೌನ್ ಘೋಷನೆಯಾಗಿರುವ ಹಿನ್ನಲೆಯಲ್ಲಿ ಸುಮಾರು ಕುಟುಂಬಗಳು ಸಂಕಷ್ಟದಲ್ಲಿದೆ ಹಾಗಾಗಿ ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್ ರಾಜೇಂದ್ರ ಕುಮಾರ್, ಬಂಜರ ಪ್ರಕಾಶ್ ಶೆಟ್ಟಿ,ಪುತ್ತಿಗೆ ಶ್ರೀಗಳು ಸೇರಿದಂತೆ ಆತ್ಮೀಯ ಸ್ನೇಹಿತರ ಹಾಗೂ ದಾನಿಗಳ ಸಹಕಾರ ಪಡೆದು ಯಾವುದೇ ದುರುಪಯೋಗವಾಗದಂತೆ ಖುದ್ದಾಗಿ ಉತ್ತಮ ಗುಣ ಮಟ್ಟದ ಪಡಿತರ ಕಿಟ್ ತಯಾರು ಮಾಡಿ ಮನೆಮನೆಗೆ ಮುಟ್ಟಿಸುವ ಕಾರ್ಯ ಮಾಡುತ್ತಿದ್ದೇವೆ, ಪ್ರತಿದಿನ ನೂರು ಮನೆಗೆ ಮುಟ್ಟಿಸುವ ಕೆಲಸ ಆಗುತ್ತಿದೆ ಇದುವರೆಗೆ ಒಂದು ಸಾವಿರಕುಟುಂಬಗಳಗೆ ವಿತರಣೆ ಮಾಡಿದ್ದೇವೆ ಎಂದರು. ದೇಶಕ್ಕೆ ಆವರಿಸಿರುವ ಈ ಮಹಮಾರಿ ದೂರವಾಗಿ ಆದಷ್ಟು ಶೀಘ್ರವಾಗಿ ಹೊಸ ಜೀವನ ನಡೆಸುವಂತಾಗಲಿ, ಇಂತಹ ಸಂಕಷ್ಟದ ಸಮಯದಲ್ಲಿ ಉಳ್ಳವರು ಇಲ್ಲದವರಿಗೆ ಸೇವೆ ಮಾಡುವುದು ಧರ್ಮ ಮತ್ತು ಕರ್ತವ್ಯ ನಾವು ಮಾಡುತ್ತಿರುವುದು ದೇವರ ಕಾರ್ಯ ಎಂದರು.” ಕಿಟ್ ವಿತರಣೆ ಕಾರ್ಯದಲ್ಲಿ ಜಹೀರ್ ಅಹಮ್ಮದ್ ಸೇರಿದಂತೆ ಮೊದಲಾದವರು ಕೈ ಜೋಡಿಸಿದ್ದಾರೆ.

                                                                              video

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago