ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗದಲ್ಲಿ ನಡೆದಿದೆ.
ನಗರದ ಕರೆಮ್ಮಕಲ್ ಬಡಾವಣೆಯ ನಿವಾಸಿ ಸಂಪತ್ ದಂಡಗಿ (38) ಮೃತ ವ್ಯಕ್ತಿ. ಬಡ್ಡಿ ದಂಧೆಕೋರರ ಕಿರುಕುಳ ಮತ್ತು ಬೆದರಿಕೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಧರ್ಮಗೌಡ ಕರಿಯನಗೌಡ್ರ ಎಂಬಾತ ಹಣ ಮತ್ತು ಬಡ್ಡಿಗಾಗಿ ನಿರಂತರವಾಗಿ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ. ಸಂಪತ್ ಪತ್ನಿಗೂ ಕರೆ ಮಾಡಿ ಒತ್ತಡ ಹಾಕುತ್ತಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇದಲ್ಲದೆ, ಧರ್ಮಗೌಡ ಕರಿಯನಗೌಡ್ರ ಹಾಗೂ ರವಿ ಶಿವನಗುತ್ತಿ ಎಂಬುವವರು ಸಂಪತ್ಗೆ ಕರೆ ಮಾಡಿ, ನಿನ್ನ ಮತ್ತು ನಿನ್ನ ಪತ್ನಿಯ ಹೆಸರಿನ ಚೆಕ್ಗಳಿವೆ. ಚೆಕ್ ಬೌನ್ಸ್ ಪ್ರಕರಣ ದಾಖಲಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದರು ಎಂದು ಮೃತನ ಪತ್ನಿ ಮತ್ತು ತಾಯಿ ಆರೋಪಿಸಿದ್ದಾರೆ. ಈ ನಿರಂತರ ಕಿರುಕುಳದಿಂದ ಮನನೊಂದ ಸಂಪತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…