ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗದಲ್ಲಿ ನಡೆದಿದೆ.
ನಗರದ ಕರೆಮ್ಮಕಲ್ ಬಡಾವಣೆಯ ನಿವಾಸಿ ಸಂಪತ್ ದಂಡಗಿ (38) ಮೃತ ವ್ಯಕ್ತಿ. ಬಡ್ಡಿ ದಂಧೆಕೋರರ ಕಿರುಕುಳ ಮತ್ತು ಬೆದರಿಕೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಧರ್ಮಗೌಡ ಕರಿಯನಗೌಡ್ರ ಎಂಬಾತ ಹಣ ಮತ್ತು ಬಡ್ಡಿಗಾಗಿ ನಿರಂತರವಾಗಿ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ. ಸಂಪತ್ ಪತ್ನಿಗೂ ಕರೆ ಮಾಡಿ ಒತ್ತಡ ಹಾಕುತ್ತಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇದಲ್ಲದೆ, ಧರ್ಮಗೌಡ ಕರಿಯನಗೌಡ್ರ ಹಾಗೂ ರವಿ ಶಿವನಗುತ್ತಿ ಎಂಬುವವರು ಸಂಪತ್ಗೆ ಕರೆ ಮಾಡಿ, ನಿನ್ನ ಮತ್ತು ನಿನ್ನ ಪತ್ನಿಯ ಹೆಸರಿನ ಚೆಕ್ಗಳಿವೆ. ಚೆಕ್ ಬೌನ್ಸ್ ಪ್ರಕರಣ ದಾಖಲಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದರು ಎಂದು ಮೃತನ ಪತ್ನಿ ಮತ್ತು ತಾಯಿ ಆರೋಪಿಸಿದ್ದಾರೆ. ಈ ನಿರಂತರ ಕಿರುಕುಳದಿಂದ ಮನನೊಂದ ಸಂಪತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]