ಬೆಂಗಳೂರು: ಬಡ, ಮಧ್ಯಮ ವರ್ಗದವರಿಗೆ ಅತ್ಯಾಧುನಿಕ ಚಿಕಿತ್ಸೆ ಲಭ್ಯವಾಗುವಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೊಬೋಟಿಕ್ ತಂತ್ರಜ್ಞಾನ ಚಿಕಿತ್ಸೆ ಒದಗಿಸಲು ಹಾಗೂ ವೈದ್ಯರಿಗೆ ಅದರ ತರಬೇತಿ ನೀಡಲು ಸರ್ಕಾರ ಕ್ರಮವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಲ್ಲಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿ ₹150 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಖಾಸಗಿ ಆಸ್ಪತ್ರೆಗಳ ಮಟ್ಟಕ್ಕೆ ಸರ್ಕಾರಿ ಆಸ್ಪತ್ರೆಯಲ್ಲೂ ಅತ್ಯಾಧುನಿಕ ತಂತ್ರಜ್ಞಾನದ ಚಿಕಿತ್ಸೆ ಸಿಗಬೇಕು. ಕಿದ್ವಾಯಿ ಆಸ್ಪತ್ರೆಯಲ್ಲಿ ರೊಬೋಟಿಕ್ ಚಿಕಿತ್ಸೆ ಇದೆ. ಆದರೆ, ಕೇವಲ ಇಲ್ಲೊಂದೆ ಇದ್ದರೆ ಸಾಧ್ಯವಿಲ್ಲ. ರಾಜ್ಯದ ಇನ್ನಿತರ ಆಸ್ಪತ್ರೆಗಳಲ್ಲೂ ಈ ಸೌಲಭ್ಯ ಸಿಗಬೇಕು. ಜೊತೆಗೆ ವೈದ್ಯರಿಗೆ ಇವುಗಳ ಬಳಕೆಯ ತರಬೇತಿ ನೀಡಿ ಕೌಶಲ್ಯ ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದರು. ಖಾಸಗಿ ಆಸ್ಪತ್ರೆಗಲ್ಲಿ ಸಣ್ಣಪುಟ್ಟ ಶಸ್ತ್ರಚಿಕಿತ್ಸೆಗೂ ₹30 ಲಕ್ಷದವರೆಗೂ ಶುಲ್ಕ ವಿಧಿಸುತ್ತಿವೆ. ದುಬಾರಿ ವೆಚ್ಚ ಪಾವತಿಸಲಾಗದೆ ಬಡವರು ನೆರವು ಕೇಳಿ ಬರುತ್ತಾರೆ. ಆದರೆ, ಮುಖ್ಯಮಂತ್ರಿ ಪರಿಹಾರ ನಿಧಿಯಡಿ ಗರಿಷ್ಠ ₹5 ಲಕ್ಷದವರೆಗೆ ಮಾತ್ರ ನೆರವು ನೀಡಲು ಸಾಧ್ಯ.
ಅದೇ ಅತ್ಯಾಧುನಿಕ ಸೌಲಭ್ಯ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಲಭಿಸಿದರೆ ಬಡವರಿಗೆ ಅನುಕೂಲವಾಗಿ ಖಾಸಗಿ ಆಸ್ಪತ್ರೆಗೆ ಹೋಗುವವರು ಕಡಿಮೆಯಾಗುತ್ತಾರೆ ಎಂದು ಹೇಳಿದರು. ‘ನಾನು ಸೇರಿ ಸಚಿವರು ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಹೋಗಲ್ಲ. ಹೀಗಾಗಿ ಅಲ್ಲಿನ ವ್ಯವಸ್ಥೆ ಬಗ್ಗೆ ಗೊತ್ತಾಗಲ್ಲ. ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಸರ್ಕಾರಿ ವೈದ್ಯರಿಗೆ ಹೆಚ್ಚು ಅನುಭವ ಇರುತ್ತದೆ. ಸರ್ಕಾರಿ ವೈದ್ಯರು ರೋಗಿಗಳ ಜೊತೆ ಸೌಹಾರ್ದಯುತವಾಗಿ ವರ್ತಿಸಿ, ಕಷ್ಟ ಆಲಿಸಬೇಕು. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಪೌಷ್ಟಿಕ ಆಹಾರ ಸಿಗುವಂತಾಗಬೇಕು’ ಎಂದು ಹೇಳಿದರು.
ತಾಯಿ ಮತ್ತು ಮಕ್ಕಳ ಆಸ್ಪತ್ರೆ: ಕೆ.ಸಿ.ಜನರಲ್ ಆಸ್ಪತ್ರೆಯ ಆವರಣದಲ್ಲಿ ₹66.78 ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಈ ಕಟ್ಟಡ 2131 ಚದರ ಮೀಟರ್ ವಿಸ್ತೀರ್ಣದಲ್ಲಿ ತಲೆ ಎತ್ತಲಿದೆ. ಕಟ್ಟಡದ ಅಡಿಪಾಯದ ವಿಸ್ತೀರ್ಣ 2,131 ಚದರ ಮೀಟರ್ ಇರಲಿದೆ. ನಾಲ್ಕು ಮಹಡಿಯ ಈ ಆಸ್ಪತ್ರೆಯು, 200 ಹಾಸಿಗೆ ಸಾಮರ್ಥ್ಯ ಹೊಂದಿರಲಿದೆ.
ಜಯದೇವ ಘಟಕ24 ಗಂಟೆ ಕಾರ್ಯ: ಕಾರ್ಯಕ್ರಮದ ವೇದಿಕೆಯಿಂದ ಜಯದೇವ ಆಸ್ಪತ್ರೆ ನಿರ್ದೇಶಕರಿಗೆ ಕರೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಯ ಘಟಕ 24 ಗಂಟೆಯೂ ತೆರೆಯುವಂತೆ ಸೂಚಿಸಿದರು. ಈ ಘಟಕ ಸಂಜೆ 5 ಗಂಟೆವರೆಗೆ ತೆರೆದಿರುತ್ತಿದೆ. ಆದರೆ, ಹೃದಯ ಸಮಸ್ಯೆಗೆ ಒಳಗಾದವರಿಗೆ ಸಕಾಲದಲ್ಲಿ ಆಂಜಿಯೋಗ್ರಾಮ್ ಮತ್ತು ಆಂಜಿಯೋಪ್ಲಾಸ್ಟಿ ಸಕಾಲದಲ್ಲಿ ಮಾಡಬೇಕು. ಹೀಗಾಗಿ ಜಯದೇವ ಘಟಕ ಇಡೀ ದಿನ ಕಾಸರ್ಯನಿರ್ವಹಿಸುವಂತೆ ಸಂಸ್ಥೆಯ ನಿರ್ದೇಶಕರಿಗೆ ಸೂಚಿಸಿದ್ದೇವೆ. ಇದಕ್ಕೆ ಬೇಕಾಗುವ ಹೆಚ್ಚುವರಿ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಹೇಳಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…