Featured

ಬಡ, ಮಧ್ಯಮ ವರ್ಗದವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೊಬೋಟಿಕ್‌ ತಂತ್ರಜ್ಞಾನ ಚಿಕಿತ್ಸೆ : ಸಿದ್ದರಾಮಯ್ಯ – vishwanews24

ಬಡ, ಮಧ್ಯಮ ವರ್ಗದವರಿಗೆ ಅತ್ಯಾಧುನಿಕ ಚಿಕಿತ್ಸೆ ಲಭ್ಯವಾಗುವಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೊಬೋಟಿಕ್‌ ತಂತ್ರಜ್ಞಾನ ಚಿಕಿತ್ಸೆ : ಸಿದ್ದರಾಮಯ್ಯ

ಬೆಂಗಳೂರು: ಬಡ, ಮಧ್ಯಮ ವರ್ಗದವರಿಗೆ ಅತ್ಯಾಧುನಿಕ ಚಿಕಿತ್ಸೆ ಲಭ್ಯವಾಗುವಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೊಬೋಟಿಕ್‌ ತಂತ್ರಜ್ಞಾನ ಚಿಕಿತ್ಸೆ ಒದಗಿಸಲು ಹಾಗೂ ವೈದ್ಯರಿಗೆ ಅದರ ತರಬೇತಿ ನೀಡಲು ಸರ್ಕಾರ ಕ್ರಮವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಲ್ಲಿನ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿ ₹150 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಖಾಸಗಿ ಆಸ್ಪತ್ರೆಗಳ ಮಟ್ಟಕ್ಕೆ ಸರ್ಕಾರಿ ಆಸ್ಪತ್ರೆಯಲ್ಲೂ ಅತ್ಯಾಧುನಿಕ ತಂತ್ರಜ್ಞಾನದ ಚಿಕಿತ್ಸೆ ಸಿಗಬೇಕು. ಕಿದ್ವಾಯಿ ಆಸ್ಪತ್ರೆಯಲ್ಲಿ ರೊಬೋಟಿಕ್‌ ಚಿಕಿತ್ಸೆ ಇದೆ. ಆದರೆ, ಕೇವಲ ಇಲ್ಲೊಂದೆ ಇದ್ದರೆ ಸಾಧ್ಯವಿಲ್ಲ. ರಾಜ್ಯದ ಇನ್ನಿತರ ಆಸ್ಪತ್ರೆಗಳಲ್ಲೂ ಈ ಸೌಲಭ್ಯ ಸಿಗಬೇಕು. ಜೊತೆಗೆ ವೈದ್ಯರಿಗೆ ಇವುಗಳ ಬಳಕೆಯ ತರಬೇತಿ ನೀಡಿ ಕೌಶಲ್ಯ ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದರು. ಖಾಸಗಿ ಆಸ್ಪತ್ರೆಗಲ್ಲಿ ಸಣ್ಣಪುಟ್ಟ ಶಸ್ತ್ರಚಿಕಿತ್ಸೆಗೂ ₹30 ಲಕ್ಷದವರೆಗೂ ಶುಲ್ಕ ವಿಧಿಸುತ್ತಿವೆ. ದುಬಾರಿ ವೆಚ್ಚ ಪಾವತಿಸಲಾಗದೆ ಬಡವರು ನೆರವು ಕೇಳಿ ಬರುತ್ತಾರೆ. ಆದರೆ, ಮುಖ್ಯಮಂತ್ರಿ ಪರಿಹಾರ ನಿಧಿಯಡಿ ಗರಿಷ್ಠ ₹5 ಲಕ್ಷದವರೆಗೆ ಮಾತ್ರ ನೆರವು ನೀಡಲು ಸಾಧ್ಯ.

ಅದೇ ಅತ್ಯಾಧುನಿಕ ಸೌಲಭ್ಯ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಲಭಿಸಿದರೆ ಬಡವರಿಗೆ ಅನುಕೂಲವಾಗಿ ಖಾಸಗಿ ಆಸ್ಪತ್ರೆಗೆ ಹೋಗುವವರು ಕಡಿಮೆಯಾಗುತ್ತಾರೆ ಎಂದು ಹೇಳಿದರು. ‘ನಾನು ಸೇರಿ ಸಚಿವರು ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಹೋಗಲ್ಲ. ಹೀಗಾಗಿ ಅಲ್ಲಿನ ವ್ಯವಸ್ಥೆ ಬಗ್ಗೆ ಗೊತ್ತಾಗಲ್ಲ. ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಸರ್ಕಾರಿ ವೈದ್ಯರಿಗೆ ಹೆಚ್ಚು ಅನುಭವ ಇರುತ್ತದೆ. ಸರ್ಕಾರಿ ವೈದ್ಯರು ರೋಗಿಗಳ ಜೊತೆ ಸೌಹಾರ್ದಯುತವಾಗಿ ವರ್ತಿಸಿ, ಕಷ್ಟ ಆಲಿಸಬೇಕು. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಪೌಷ್ಟಿಕ ಆಹಾರ ಸಿಗುವಂತಾಗಬೇಕು’ ಎಂದು ಹೇಳಿದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆ: ಕೆ.ಸಿ.ಜನರಲ್ ಆಸ್ಪತ್ರೆಯ ಆವರಣದಲ್ಲಿ ₹66.78 ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಈ ಕಟ್ಟಡ 2131 ಚದರ ಮೀಟರ್‌ ವಿಸ್ತೀರ್ಣದಲ್ಲಿ ತಲೆ ಎತ್ತಲಿದೆ. ಕಟ್ಟಡದ ಅಡಿಪಾಯದ ವಿಸ್ತೀರ್ಣ 2,131 ಚದರ ಮೀಟರ್ ಇರಲಿದೆ. ನಾಲ್ಕು ಮಹಡಿಯ ಈ ಆಸ್ಪತ್ರೆಯು, 200 ಹಾಸಿಗೆ ಸಾಮರ್ಥ್ಯ ಹೊಂದಿರಲಿದೆ.

ಜಯದೇವ ಘಟಕ24 ಗಂಟೆ ಕಾರ್ಯ: ಕಾರ್ಯಕ್ರಮದ ವೇದಿಕೆಯಿಂದ ಜಯದೇವ ಆಸ್ಪತ್ರೆ ನಿರ್ದೇಶಕರಿಗೆ ಕರೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಯ ಘಟಕ 24 ಗಂಟೆಯೂ ತೆರೆಯುವಂತೆ ಸೂಚಿಸಿದರು. ಈ ಘಟಕ ಸಂಜೆ 5 ಗಂಟೆವರೆಗೆ ತೆರೆದಿರುತ್ತಿದೆ. ಆದರೆ, ಹೃದಯ ಸಮಸ್ಯೆಗೆ ಒಳಗಾದವರಿಗೆ ಸಕಾಲದಲ್ಲಿ ಆಂಜಿಯೋಗ್ರಾಮ್ ಮತ್ತು ಆಂಜಿಯೋಪ್ಲಾಸ್ಟಿ ಸಕಾಲದಲ್ಲಿ ಮಾಡಬೇಕು. ಹೀಗಾಗಿ ಜಯದೇವ ಘಟಕ ಇಡೀ ದಿನ ಕಾಸರ್ಯನಿರ್ವಹಿಸುವಂತೆ ಸಂಸ್ಥೆಯ ನಿರ್ದೇಶಕರಿಗೆ ಸೂಚಿಸಿದ್ದೇವೆ. ಇದಕ್ಕೆ ಬೇಕಾಗುವ ಹೆಚ್ಚುವರಿ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಹೇಳಿದರು.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago