ಬೆಂಗಳೂರು: ಬಡ ವ್ಯಾಪಾರಿಗಳಿಗೆ ಸರಿಯಾಗಿ ಸರ್ಕಾರದ ಯೋಜನೆಯ ಪ್ರಯೋಜನಗಳು ತಲುಪುತ್ತಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಡವರ ಬಂಧು ಯೋಜನೆ ಕುಂಟುತ್ತಿರುವುದರ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿರುವ ಅವರು, ಮೀಟರ್ ಬಡ್ಡಿದಾರರಿಂದ ಬಡ ಬೀದಿ ಬದಿ ವ್ಯಾಪಾರಿಗಳನ್ನು ಮುಕ್ತಗೊಳಿಸಲು ಮೈತ್ರಿ ಸರ್ಕಾರ ಬಡವರ ಬಂಧು ಯೋಜನೆ ಜಾರಿಗೊಳಿಸಿತ್ತು. ಈ ಯೋಜನೆ ಮುಂದುವರಿಸುವ ಬಗ್ಗೆ ಬಿಜೆಪಿ ಸರ್ಕಾರ ಯಾವುದೇ ಸೂಚನೆ ನೀಡಿಲ್ಲ. ಆದಕಾರಣ ಬಡ ವ್ಯಾಪಾರಿಗಳಿಗೆ ಯೋಜನೆ ಪ್ರಯೋಜನ ತಲುಪುತ್ತಿಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ಅಧಿಕಾರಕ್ಕೆ ಬಂದ ದಿನ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದ ನೀವು ಈಗೇಕೆ ಈ ರೀತಿ ವರ್ತಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್.ಯಡಿಯೂರಪ್ಪ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ ಮಾಡಿ ಪಕ್ಷಪಾತಿ ನಿಲುವನ್ನು ಪ್ರತಿಪಾದಿಸಿದ್ದಾರೆ. ಅಗತ್ಯವಿದ್ದರೆ ಮತ್ತಷ್ಟು ನೀಡಲಿ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ..? ಇದು ನಾಚಿಕೆಗೇಡಿನ ರಾಜಕೀಯ ಎಂದು ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…