ಬೆಂಗಳೂರು: ಬಡ ವ್ಯಾಪಾರಿಗಳಿಗೆ ಸರಿಯಾಗಿ ಸರ್ಕಾರದ ಯೋಜನೆಯ ಪ್ರಯೋಜನಗಳು ತಲುಪುತ್ತಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಡವರ ಬಂಧು ಯೋಜನೆ ಕುಂಟುತ್ತಿರುವುದರ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿರುವ ಅವರು, ಮೀಟರ್ ಬಡ್ಡಿದಾರರಿಂದ ಬಡ ಬೀದಿ ಬದಿ ವ್ಯಾಪಾರಿಗಳನ್ನು ಮುಕ್ತಗೊಳಿಸಲು ಮೈತ್ರಿ ಸರ್ಕಾರ ಬಡವರ ಬಂಧು ಯೋಜನೆ ಜಾರಿಗೊಳಿಸಿತ್ತು. ಈ ಯೋಜನೆ ಮುಂದುವರಿಸುವ ಬಗ್ಗೆ ಬಿಜೆಪಿ ಸರ್ಕಾರ ಯಾವುದೇ ಸೂಚನೆ ನೀಡಿಲ್ಲ. ಆದಕಾರಣ ಬಡ ವ್ಯಾಪಾರಿಗಳಿಗೆ ಯೋಜನೆ ಪ್ರಯೋಜನ ತಲುಪುತ್ತಿಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ಅಧಿಕಾರಕ್ಕೆ ಬಂದ ದಿನ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದ ನೀವು ಈಗೇಕೆ ಈ ರೀತಿ ವರ್ತಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್.ಯಡಿಯೂರಪ್ಪ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ ಮಾಡಿ ಪಕ್ಷಪಾತಿ ನಿಲುವನ್ನು ಪ್ರತಿಪಾದಿಸಿದ್ದಾರೆ. ಅಗತ್ಯವಿದ್ದರೆ ಮತ್ತಷ್ಟು ನೀಡಲಿ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ..? ಇದು ನಾಚಿಕೆಗೇಡಿನ ರಾಜಕೀಯ ಎಂದು ಆರೋಪಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…