Featured

ಬದನೆಕಾಯಿ ಹಾಗೂ ಅದರ ಎಲೆಯಲ್ಲಿ ಹಲವಾರು ಆರೋಗ್ಯವರ್ಧಕ ಗುಣಗಳಿವೆ ಅವುಗಳು ಯಾವುದು ಇಲ್ಲಿವೆ ನೋಡಿ .. -Vishwanews24

ಅಡುಗೆಯ ರುಚಿ ಹೆಚ್ಚಿಸುವ ಬದನೆಕಾಯಿ ಹಾಗೂ ಅದರ ಎಲೆಯಲ್ಲಿ ಹಲವಾರು ಆರೋಗ್ಯವರ್ಧಕ ಗುಣಗಳಿವೆ. ಆದರೆ ಪಿತ್ತದ ತೊಂದರೆಯಿಂದ ಬಳಲುತ್ತಿದ್ದರೆ ಬದನೆಯನ್ನು ಹೆಚ್ಚಾಗಿ ಸೇವಿಸಬಾರದು.

►ಕೊಲೆಸ್ಟ್ರಾಲ್ ಸಾಮಾನ್ಯವಾಗಿ ಈಗ ಬಹುತೇಕ ಮಂದಿಯನ್ನು ಕಾಡುವ ಸಮಸ್ಯೆ. ಇದಕ್ಕೆ ಉತ್ತರವಾಗಿದೆ ಬದನೆ. ಇದು ಕೊಲೆಸ್ಟ್ರಾಲ್‌ ಮಟ್ಟವನ್ನು  ಕಡಿಮೆ ಮಾಡುತ್ತದೆ. ಇದು ರಕ್ತದೊತ್ತಡ ನಿರ್ವಹಿಸಲು ಸಹ ಸಹಾಯ ಮಾಡುತ್ತದೆ. ಸಾಧಾರಣ ಕೊಲೆಸ್ಟ್ರಾಲ್ ಮಟ್ಟ ಮತ್ತು ರಕ್ತದೊತ್ತಡ ನಿಯಂತ್ರಣ ಹೃದಯ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತವೆ.

►ಅಂಗೈ ಮತ್ತು ಅಂಗಾಲು ಬೆವರುತ್ತಿದ್ದರೆ ಬದನೆಯನ್ನು ಸಣ್ಣಗೆ ಹೆಚ್ಚಿ ನೀರಿಗೆ ಹಾಕಿ. ಸ್ವಲ್ಪ ಸಮಯದ ನಂತರ ಬದನೆಯನ್ನು ತೆಗೆದು ಆ ನೀರಿನಲ್ಲಿ ದಿನವೂ ಕೈ-ಕಾಲುಗಳನ್ನು 30 ನಿಮಿಷಗಳು ಮುಳುಗಿಸಿಡಬೇಕು. ಬೆವರು ನಿಲ್ಲುತ್ತದೆ.

►ಮೈಯೆಲ್ಲ ವಿಪರೀತ ತುರಿಕೆಯಿಂದ ಕೂಡಿದ್ದರೆ ಬದನೆಯ ಎಲೆಗಳನ್ನು ಅರೆದು ಸಕ್ಕರೆ ಸೇರಿಸಿ ತುರಿಕೆ ಇರುವ ಜಾಗಕ್ಕೆ ಹಚ್ಚಿ  ಒಂದು ಗಂಟೆಯ ನಂತರ ಬಿಸಿ ನೀರಿನಲ್ಲಿ ಸ್ನಾನ ಮಾಡಿದರೆ ಸಮಸ್ಯೆ ನಿವಾರಣೆಯಾಗುತ್ತದೆ.

►ಬದನೆ ಎಲೆಗಳನ್ನು ಕೆಂಡದಲ್ಲಿ ಬಿಸಿ ಮಾಡಿ ಏಟುಬಿದ್ದ ಗಾಯದ ಮೇಲೆ ಕಟ್ಟಿದರೆ ನೋವು ಬೇಗ ಗುಣವಾಗುತ್ತದೆ.

►ಇದು ಸ್ಮರಣ ಶಕ್ತಿಯನ್ನು ಹೆಚ್ಚಿಸುವ ತರಕಾರಿಯೂ ಹೌದು.

►ನೇರಳೆ ಬಣ್ಣದ ಬದನೆಯನ್ನು ಬೇಯಿಸಿ, ಸ್ವಲ್ಪ ಬೆಲ್ಲ ಸೇರಿಸಿ ಬೆಳಿಗ್ಗೆ ಸೇವಿಸುತ್ತಾ ಬಂದರೆ ಮೂಲವ್ಯಾಧಿ ಕಡಿಮೆಯಾಗುತ್ತದೆ.

►ಎಳೆಯ ಬದನೆಯನ್ನು ಹಸುವಿನ ತುಪ್ಪದಲ್ಲಿ ಹುರಿದು ಸೇವಿಸಿದರೆ ಕಣ್ಣಿನ ತೊಂದರೆ ದೂರವಾಗಿ ದೃಷ್ಟಿ ಸಾಮರ್ಥ್ಯ ಹೆಚ್ಚಿಸುತ್ತದೆ.

►ಇದರ ನಿಯಮಿತ ಸೇವನೆಯಿಂದ ದೇಹದಲ್ಲಿರುವ ಹೆಚ್ಚುವರಿ ಕಬ್ಬಿಣದ ಅಂಶ ಹೊರಟುಹೋಗುತ್ತದೆ. ಇದು ಪಾಲಿಸಿಥಿಮಿಯಾ ರೋಗಿಗಳಿಗೆ ಹೆಚ್ಚು ಉಪಯುಕ್ತ. ಬದನೆಯಲ್ಲಿರುವ ನಸುಯೈನ್  ಎಂಬ ಒಂದು ಸಂಯುಕ್ತ ಪ್ರಸ್ತುತ ದೇಹದ ಅತಿಯಾದ ಕಬ್ಬಿಣದ ಅಂಶವನ್ನು ತೆಗೆದುಹಾಕುವಲ್ಲಿ ಸಹಾಯ ಮಾಡುತ್ತದೆ .

►ಬದನೆಯಲ್ಲಿ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುವ ವಿಟಮಿನ್ ‘ಸಿ’ ಅಂಶ ಅಧಿಕ ಪ್ರಮಾಣದಲ್ಲಿದೆ.

►ಬದನೆ ರೋಗ ನಿರೋಧಕ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಸಹಾಯ ಮಾಡುತ್ತದೆ.

►ತ್ವಚೆಯ ಹೊಳಪಿಗೆ ಅತ್ಯಗತ್ಯವಾಗಿರುವ ಖನಿಜಗಳು, ಜೀವಸತ್ವಗಳು ಮತ್ತು ನಾರಿನಾಂಶ ಬದನೆಯಲ್ಲಿದೆ. ಇದರಿಂದ ತ್ವಚೆಯನ್ನು ಬಲವಾಗಿ ಹಾಗೂ ವಯಸ್ಸಿನ ಕಳೆಯನ್ನು ತೆಗೆಯಲು ನಿಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸಬಹುದು.

►ಬದನೆಯಲ್ಲಿರುವ ಕೆಲವು ಕಿಣ್ವಗಳು ಕೂದಲಿನ ರಕ್ಷಕರಂತೆ ಕೆಲಸ ಮಾಡಿ ಕೂದಲು ಬೆಳವಣಿಗೆಗೆ ಸಹಾಯ ಮಾಡುತ್ತದೆ ಮತ್ತು ಕೂದಲಿನ ಆರೋಗ್ಯಕರ ವಿನ್ಯಾಸ ನಿರ್ವಹಿಸಲು ಸಹಾಯಕವಾಗಿದೆ.

►ಬದನೆಯಲ್ಲಿ ನೀರನ ಅಂಶ ಅಧಿಕವಾಗಿದೆ. ಇದು ತ್ವಚೆಯನ್ನು ಅಗತ್ಯದಷ್ಟು ತೇವಾಂಶಯುಕ್ತವಾಗಿಡಲು ಸಹಾಯ ಮಾಡುತ್ತದೆ. ಇದರಿಂದಾಗಿ ಶುಷ್ಕ ತ್ವಚೆಯಿಂದ ಮುಕ್ತಿ ಹೊಂದಬಹುದು ಮತ್ತು ನಿಮ್ಮ ದೇಹದ ಸಹವರ್ತಿಯಂತೆ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

7 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

11 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

11 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

11 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

12 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

12 hours ago