ನವದೆಹಲಿ: ಜಾತ್ರೆಯಲ್ಲಿ ಬಲೂನ್ ಮಾರುತ್ತಿರುವ ಹುಡುಗಿಯೊಬ್ಬಳು ಪಯ್ಯನ್ನೂರು ಮೂಲದ ಛಾಯಾಗ್ರಾಹಕ ಅರ್ಜುನ್ ಕೃಷ್ಣನ್ ಕಣ್ಣಿಗೆ ಬಿದ್ದಿದ್ದು, ಇದೀಗ ಆಕೆಯ ಮೇಕ್ ಓವರ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
ಕಣ್ಣೂರು ಅಂದಲ್ಲೂರ್ಕಾವು ಉತ್ಸವದಲ್ಲಿ ಕಿಸ್ಬು ಎಂಬ ಹುಡುಗಿ ಬಲೂನ್ ಮಾರಾಟ ಮಾಡುತ್ತಿದ್ದ ವೇಳೆ ಛಾಯಾಗ್ರಾಹಕ ಅರ್ಜುನ್ ಕೃಷ್ಣನ್ ಅವರ ಕಣ್ಣಿಗೆ ಬಿದ್ದಿದ್ದು, ಆಕೆ ಆಕಾಶಬುಟ್ಟಿಗಳು ಮತ್ತು ದೀಪಗಳ ನಡುವೆ ನಿಂತಿದ್ದಳು. ಇದನ್ನೇ ಗಮನಿಸಿದ ಛಾಯಾಗ್ರಾಹಕ ಹುಡುಗಿಯ ಫೋಟೋ ಕ್ಲಿಕ್ಕಿಸಿದ್ದಾರೆ. ನಂತರ ಈ ಫೋಟೋವನ್ನು ಹುಡುಗಿಯಾ ತಾಯಿಗೂ ತೋರಿಸಲಾಗಿದ್ದು ಅವರು ಕೂಡಾ ಮಗಳ ಫೋಟೋ ನೋಡಿ ಸಂತೋಷ ಪಟ್ಟಿದ್ದಾರೆ.
https://www.instagram.com/p/Caj1YEwJNXD/?utm_source=ig_embed&utm_campaign=embed_video_watch_again
ಇನ್ನು ಎರಡು ದಿನಗಳ ನಂತರ ಅರ್ಜುನ್ ಸೋಶಿಯಲ್ ಮೀಡಿಯಾದಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಫೋಟೋ ಶೇರ್ ಆದ ತಕ್ಷಣವೇ ಫೋಟೋಗೆ ಅದ್ಬುತ ಪ್ರತಿಕ್ರಿಯೆ ಸಿಕ್ಕಿದ್ದು, ಬಳಿಕ ಅರ್ಜುನ್ ಕಿಸ್ಬು ಜೊತೆ ಮೇಕ್ ಓವರ್ ಫೋಟೋ ಶೂಟ್ ಮಾಡಿಸಿದ್ದಾರೆ. ಸ್ಟೈಲಿಸ್ಟ್ ರಮ್ಯಾ ಅವರ ಸಹಾಯದಿಂದ ಅರ್ಜುನ್ ಕಿಸ್ಬು ಅವರ ಕೆಲವು ಸುಂದರವಾದ ಚಿತ್ರಗಳನ್ನು ಚಿತ್ರೀಕರಿಸಿದ್ದು ಸದ್ಯ ಈ ಪೋಟೊಗಳು ಸಖತ್ ವೈರಲ್ ಆಗಿದೆ.
ಈ ಪೋಟೊವನ್ನು ಗಮನಿಸಿ ಕಿಸ್ಬುಗೆ ಸಾಕಷ್ಟು ಆಫರ್ ಕೂಡ ಸಿಕ್ಕಿದ್ದು, ಅರ್ಜುನ್ 15 ವರ್ಷಗಳಿಂದ ಫ್ರೀಲಾನ್ಸ್ ವೆಡ್ಡಿಂಗ್ ಫೋಟೋಗ್ರಾಫರ್ ಆಗಿದ್ದಾರೆ.
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…