ಶಿವಮೊಗ್ಗ : ಬದುಕಿನ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಬಿಎಸ್ವೈ ಅಭಿಮಾನಿ ಬಳಗ ಆಯೋಜಿಸಿದ್ದ ‘ನಮ್ಮೊಲುಮೆ ಭಾವಾಭಿನಂದನೆ’ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಯಡಿಯೂರಪ್ಪ, ಮಂಡ್ಯದಲ್ಲಿ ನನ್ನ ಮಾವ ಹಾಗೂ ತಾತನೊಂದಿಗೆ ತರಕಾರಿ ಮಾರುತ್ತಿದ್ದೆ.ನಾನು ಅಲ್ಲಿ ನಿಂಬೆಹಣ್ಣು ಮಾರುತ್ತಿದ್ದುದ್ದನ್ನು ಇನ್ನೂ ಅಲ್ಲಿಯ ಜನ ನೆನೆಸಿಕೊಳ್ಳುತ್ತಿದ್ದಾರೆ. ಬಡತನದಲ್ಲಿ ಹುಟ್ಟಿ ಬೆಳೆದ ನಾನು, ಈ ಮಟ್ಟಕ್ಕೆ ಬೆಳೆದಿದ್ದೇನೆ ಅಂದರೆ ಜನರ ಪ್ರೀತಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾರಣ. ಒಂದು ವಿಶೇಷ ಕಾರಣಕ್ಕೆ ನಾನು ಮಂಡ್ಯದಿಂದ ಶಿವಮೊಗ್ಗಕ್ಕೆ ಬರಬೇಕಾಯಿತು. ದೇವರು ಎಲ್ಲರಿಗೂ ಎಲ್ಲ ಶಕ್ತಿ ನೀಡಿದ್ದಾನೆ. ದೊಡ್ಡ ಗುರಿ ಮುಂದಿಟ್ಟುಕೊಂಡು ದೃಢ ಹೆಜ್ಜೆ ಇಟ್ಟರೆ ಮುಂದೆ ಬರಲು ಸಾಧ್ಯ.
ಹೋರಾಟದಿಂದಾಗಿಯೇ ನಾನು ಈ ಸ್ಥಿತಿಗೆ ಬಂದಿದ್ದೇನೆ. ತಪ್ಪು ಹೆಜ್ಜೆಯನ್ನಿಡದೇ ಮುಂಬರುವ ಅವಧಿಯಲ್ಲಿ ಶಿವಮೊಗ್ಗ ಮಾತ್ರವಲ್ಲದೆ, ರಾಜ್ಯವನ್ನು ಶಕ್ತಿಮೀರಿ ಅಭಿವೃದ್ಧಿ ಮಾಡುತ್ತೇನೆ. ಶಿವಮೊಗ್ಗಕ್ಕೆ ಎಲ್ಲವನ್ನೂ ಮಾಡಿದ್ದೇನೆ. ಇನ್ನೇನು ಬೇಕೋ ಹೇಳಿ ಅದನ್ನು ಮಾಡೋಣ. ಮುಂದೆ ಅಧಿಕಾರಕ್ಕೆ ಬರುವವರಿಗೆ ಶಿವಮೊಗ್ಗದಲ್ಲಿ ಏನು ಕೆಲಸ ಮಾಡಲು ಇರಬಾರದು.
ಯಾರೂ ಏನೇ ಟೀಕೆ ಮಾಡಲಿ, ನಾವು ಹೋಗುವ ದಾರಿ ಸರಿಯಿದ್ದರೆ ಟೀಕೆಗಳಿಗೆ ತಲೆಬಾಗಬೇಕಿಲ್ಲ. ನಾನು ಎಂದೂ ಟೀಕೆಗಳಿಗೆ ತಲೆ ಬಾಗಿಲ್ಲ.ಜಿಲ್ಲೆಯ ಜನರು ನನ್ನ ಸೋಲು, ಗೆಲುವು, ಕಿಚ್ಚು ಹೋರಾಟಗಳಿಗೆ ಸಾಕ್ಷಿಯಾಗಿ, ನನಗೆ ಬೆಂಬಲ ನೀಡಿದ್ದಾರೆ. ನಾನು ಎಷ್ಟು ಜನ್ಮ ಪಡೆದರೂ ತೀರಿಸಲು ಆಗದ ಪ್ರೀತಿ ನೀಡಿದ್ದೀರಿ. ನನ್ನ ಬೆಳವಣಿಗೆಗೆ ಶಿವಮೊಗ್ಗ ಜನತೆ ಮೆಟ್ಟಿಲುಗಳಾಗಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…