ಶಿವಮೊಗ್ಗ : ಬದುಕಿನ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಬಿಎಸ್ವೈ ಅಭಿಮಾನಿ ಬಳಗ ಆಯೋಜಿಸಿದ್ದ ‘ನಮ್ಮೊಲುಮೆ ಭಾವಾಭಿನಂದನೆ’ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಯಡಿಯೂರಪ್ಪ, ಮಂಡ್ಯದಲ್ಲಿ ನನ್ನ ಮಾವ ಹಾಗೂ ತಾತನೊಂದಿಗೆ ತರಕಾರಿ ಮಾರುತ್ತಿದ್ದೆ.ನಾನು ಅಲ್ಲಿ ನಿಂಬೆಹಣ್ಣು ಮಾರುತ್ತಿದ್ದುದ್ದನ್ನು ಇನ್ನೂ ಅಲ್ಲಿಯ ಜನ ನೆನೆಸಿಕೊಳ್ಳುತ್ತಿದ್ದಾರೆ. ಬಡತನದಲ್ಲಿ ಹುಟ್ಟಿ ಬೆಳೆದ ನಾನು, ಈ ಮಟ್ಟಕ್ಕೆ ಬೆಳೆದಿದ್ದೇನೆ ಅಂದರೆ ಜನರ ಪ್ರೀತಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾರಣ. ಒಂದು ವಿಶೇಷ ಕಾರಣಕ್ಕೆ ನಾನು ಮಂಡ್ಯದಿಂದ ಶಿವಮೊಗ್ಗಕ್ಕೆ ಬರಬೇಕಾಯಿತು. ದೇವರು ಎಲ್ಲರಿಗೂ ಎಲ್ಲ ಶಕ್ತಿ ನೀಡಿದ್ದಾನೆ. ದೊಡ್ಡ ಗುರಿ ಮುಂದಿಟ್ಟುಕೊಂಡು ದೃಢ ಹೆಜ್ಜೆ ಇಟ್ಟರೆ ಮುಂದೆ ಬರಲು ಸಾಧ್ಯ.
ಹೋರಾಟದಿಂದಾಗಿಯೇ ನಾನು ಈ ಸ್ಥಿತಿಗೆ ಬಂದಿದ್ದೇನೆ. ತಪ್ಪು ಹೆಜ್ಜೆಯನ್ನಿಡದೇ ಮುಂಬರುವ ಅವಧಿಯಲ್ಲಿ ಶಿವಮೊಗ್ಗ ಮಾತ್ರವಲ್ಲದೆ, ರಾಜ್ಯವನ್ನು ಶಕ್ತಿಮೀರಿ ಅಭಿವೃದ್ಧಿ ಮಾಡುತ್ತೇನೆ. ಶಿವಮೊಗ್ಗಕ್ಕೆ ಎಲ್ಲವನ್ನೂ ಮಾಡಿದ್ದೇನೆ. ಇನ್ನೇನು ಬೇಕೋ ಹೇಳಿ ಅದನ್ನು ಮಾಡೋಣ. ಮುಂದೆ ಅಧಿಕಾರಕ್ಕೆ ಬರುವವರಿಗೆ ಶಿವಮೊಗ್ಗದಲ್ಲಿ ಏನು ಕೆಲಸ ಮಾಡಲು ಇರಬಾರದು.
ಯಾರೂ ಏನೇ ಟೀಕೆ ಮಾಡಲಿ, ನಾವು ಹೋಗುವ ದಾರಿ ಸರಿಯಿದ್ದರೆ ಟೀಕೆಗಳಿಗೆ ತಲೆಬಾಗಬೇಕಿಲ್ಲ. ನಾನು ಎಂದೂ ಟೀಕೆಗಳಿಗೆ ತಲೆ ಬಾಗಿಲ್ಲ.ಜಿಲ್ಲೆಯ ಜನರು ನನ್ನ ಸೋಲು, ಗೆಲುವು, ಕಿಚ್ಚು ಹೋರಾಟಗಳಿಗೆ ಸಾಕ್ಷಿಯಾಗಿ, ನನಗೆ ಬೆಂಬಲ ನೀಡಿದ್ದಾರೆ. ನಾನು ಎಷ್ಟು ಜನ್ಮ ಪಡೆದರೂ ತೀರಿಸಲು ಆಗದ ಪ್ರೀತಿ ನೀಡಿದ್ದೀರಿ. ನನ್ನ ಬೆಳವಣಿಗೆಗೆ ಶಿವಮೊಗ್ಗ ಜನತೆ ಮೆಟ್ಟಿಲುಗಳಾಗಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…