ಶಿವಮೊಗ್ಗ : ಬದುಕಿನ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಬಿಎಸ್ವೈ ಅಭಿಮಾನಿ ಬಳಗ ಆಯೋಜಿಸಿದ್ದ ‘ನಮ್ಮೊಲುಮೆ ಭಾವಾಭಿನಂದನೆ’ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಯಡಿಯೂರಪ್ಪ, ಮಂಡ್ಯದಲ್ಲಿ ನನ್ನ ಮಾವ ಹಾಗೂ ತಾತನೊಂದಿಗೆ ತರಕಾರಿ ಮಾರುತ್ತಿದ್ದೆ.ನಾನು ಅಲ್ಲಿ ನಿಂಬೆಹಣ್ಣು ಮಾರುತ್ತಿದ್ದುದ್ದನ್ನು ಇನ್ನೂ ಅಲ್ಲಿಯ ಜನ ನೆನೆಸಿಕೊಳ್ಳುತ್ತಿದ್ದಾರೆ. ಬಡತನದಲ್ಲಿ ಹುಟ್ಟಿ ಬೆಳೆದ ನಾನು, ಈ ಮಟ್ಟಕ್ಕೆ ಬೆಳೆದಿದ್ದೇನೆ ಅಂದರೆ ಜನರ ಪ್ರೀತಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾರಣ. ಒಂದು ವಿಶೇಷ ಕಾರಣಕ್ಕೆ ನಾನು ಮಂಡ್ಯದಿಂದ ಶಿವಮೊಗ್ಗಕ್ಕೆ ಬರಬೇಕಾಯಿತು. ದೇವರು ಎಲ್ಲರಿಗೂ ಎಲ್ಲ ಶಕ್ತಿ ನೀಡಿದ್ದಾನೆ. ದೊಡ್ಡ ಗುರಿ ಮುಂದಿಟ್ಟುಕೊಂಡು ದೃಢ ಹೆಜ್ಜೆ ಇಟ್ಟರೆ ಮುಂದೆ ಬರಲು ಸಾಧ್ಯ.
ಹೋರಾಟದಿಂದಾಗಿಯೇ ನಾನು ಈ ಸ್ಥಿತಿಗೆ ಬಂದಿದ್ದೇನೆ. ತಪ್ಪು ಹೆಜ್ಜೆಯನ್ನಿಡದೇ ಮುಂಬರುವ ಅವಧಿಯಲ್ಲಿ ಶಿವಮೊಗ್ಗ ಮಾತ್ರವಲ್ಲದೆ, ರಾಜ್ಯವನ್ನು ಶಕ್ತಿಮೀರಿ ಅಭಿವೃದ್ಧಿ ಮಾಡುತ್ತೇನೆ. ಶಿವಮೊಗ್ಗಕ್ಕೆ ಎಲ್ಲವನ್ನೂ ಮಾಡಿದ್ದೇನೆ. ಇನ್ನೇನು ಬೇಕೋ ಹೇಳಿ ಅದನ್ನು ಮಾಡೋಣ. ಮುಂದೆ ಅಧಿಕಾರಕ್ಕೆ ಬರುವವರಿಗೆ ಶಿವಮೊಗ್ಗದಲ್ಲಿ ಏನು ಕೆಲಸ ಮಾಡಲು ಇರಬಾರದು.
ಯಾರೂ ಏನೇ ಟೀಕೆ ಮಾಡಲಿ, ನಾವು ಹೋಗುವ ದಾರಿ ಸರಿಯಿದ್ದರೆ ಟೀಕೆಗಳಿಗೆ ತಲೆಬಾಗಬೇಕಿಲ್ಲ. ನಾನು ಎಂದೂ ಟೀಕೆಗಳಿಗೆ ತಲೆ ಬಾಗಿಲ್ಲ.ಜಿಲ್ಲೆಯ ಜನರು ನನ್ನ ಸೋಲು, ಗೆಲುವು, ಕಿಚ್ಚು ಹೋರಾಟಗಳಿಗೆ ಸಾಕ್ಷಿಯಾಗಿ, ನನಗೆ ಬೆಂಬಲ ನೀಡಿದ್ದಾರೆ. ನಾನು ಎಷ್ಟು ಜನ್ಮ ಪಡೆದರೂ ತೀರಿಸಲು ಆಗದ ಪ್ರೀತಿ ನೀಡಿದ್ದೀರಿ. ನನ್ನ ಬೆಳವಣಿಗೆಗೆ ಶಿವಮೊಗ್ಗ ಜನತೆ ಮೆಟ್ಟಿಲುಗಳಾಗಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…