ಉಡುಪಿ : ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠೆ ದಿನ ರಾಮಧ್ವಜ ಆಳವಡಿಸದ ಹಿನ್ನಲೆ ಉಡುಪಿ ಬನ್ನಂಜೆ ನಾರಾಯಣಗುರು ಮಂದಿರಕ್ಕೆ ಅವಾಚ್ಯ ಶಬ್ದಗಳ ಬಳಸಿ ನಿಂದಿಸಿದ ವಿಡಿಯೋ ಮಾಡಿದ ಅನಾಮಿಕ ವ್ಯಕ್ತಿ ವಿರುದ್ಧ ಮಂದಿರದ ಆಡಳಿತ ಮಂಡಳಿಯಿಂದ ಎಸ್ಪಿಗೆ ದೂರು ನೀಡಿದರು.
ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠೆಯ ದಿನ ಬನ್ನಂಜೆ ನಾರಾಯಣಗುರು ಮಂದಿರದಲ್ಲಿ ಧ್ವಜ ಹಾಕಿಲ್ಲ ಎಂದು ಆರೋಪಿಸಿ ಉಡುಪಿ ಬಿಲ್ಲವರ ಸೇವಾ ಸಂಘದ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್ ಮಾಡಿರುವ ಕಿಡಿಗೇಡಿ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಸಂಘದ ನಿಯೋಗ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಅವರಿಗೆ ಮನವಿ ಸಲ್ಲಿಸಿತು.
ಬನ್ನಂಜೆ ನಾರಾಯಣ ಗುರು ಸಂಘ 80 ವರ್ಷದಿಂದ ಸಾಮಾಜಿಕ ಚಟುವಟಿಕೆ ಮಾಡುತ್ತಿದೆ. ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮಾಡುವ ಕೆಲಸ ಮಾಡುತ್ತಿದೆ. ರಾಮಮಂದಿರ ಪ್ರತಿಷ್ಠಾಪನೆ ದಿನ ನಾವು ವಿಶೇಷ ಪೂಜೆ ನೆರವೇರಿಸಿದ್ದೇವೆ. ಆದರೆ ಮಂದಿರದ ಆವರಣದಲ್ಲಿ ಧ್ವಜ ಮಾತ್ರ ಅಳವಡಿಸಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ ಎಸ್ಪಿ ಅರುಣ್ ಮಾತನಾಡಿ, ಬನ್ನಂಜೆ ನಾರಾಯಣ ಗುರು ಮಂದಿರದ ಆಡಳಿತ ಮಂಡಳಿ ಅವಾಚ್ಯ ಶಬ್ದ ಬಳಸಿ ನಿಂದಿಸಿರುವ ಬಗ್ಗೆ ದೂರು ನೀಡಿದ್ದಾರೆ. ಈ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯುತ್ತೇವೆ. ದೂರಿನ ಆಧಾರದ ಮೇಲೆ ತಾಂತ್ರಿಕವಾಗಿ ತನಿಖೆ ನಡೆಸುತ್ತೇವೆ. ಈ ಬಗ್ಗೆ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಎಫ್ಐಆರ್ ಮಾಡುವ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…