Featured

ಬಪ್ಪನಾಡು ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ : ಸಾಮರಸ್ಯ ಎತ್ತಿಹಿಡಿದ ಕ್ಷೇತ್ರದ ಆಡಳಿತ ಮಂಡಳಿ – Vishwanews24

ಕೆಲಸ ಮಾಡಿ ಬದುಕಲು ಜಾತಿಯನ್ನು ನೋಡಬಾರದು..

ಯಾರೇ ಆಗಲಿ ಅವರ ವ್ಯಾಪಾರಕ್ಕೆ ಅಡ್ಡಿ ಮಾಡಬಾರದು..

ಬಪ್ಪ ಬ್ಯಾರಿ ಎಂಬ ಮುಸ್ಲಿಂ ಕ್ಷೇತ್ರವನ್ನು ಜಿರ್ಣೋದ್ಧಾರ ಮಾಡಿದ ಇತಿಹಾಸವಿದೆ..

ಭಕ್ತರು ಕ್ಷೇತ್ರದ ಸೌಹಾರ್ದತೆಗೆ, ಸಾಮರಸ್ಯಕ್ಕೆ ಪ್ರೋತ್ಸಾಹ ನೀಡಬೇಕು..

ಮಂಗಳೂರು: ಬಪ್ಪನಾಡು ದೇವಸ್ಥಾನದ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧದ ವಿಚಾರವಾಗಿ ಕ್ಷೇತ್ರದ ಆಡಳಿತ ಮಂಡಳಿ ಸಾಮರಸ್ಯವನ್ನು ಎತ್ತಿ ಹಿಡಿದಿದೆ.

ಬಪ್ಪನಾಡು ಕ್ಷೇತ್ರದ ಹಿಂದೂ ಧಾರ್ಮಿಕ ಮುಖಂಡ, ಮಾಜಿ ಮೊಕ್ತೇಸರ ಹರಿಕೃಷ್ಣ ಪುನರೂರು ಮಾತನಾಡಿ, ಭಾರತದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ. ಕೆಲಸ ಮಾಡಿ ಬದುಕಲು ಜಾತಿಯನ್ನು ನೋಡಬಾರದು. ಮತಾಂತರ ಮಾಡಿದರೆ ಅವರನ್ನು ಪ್ರಶ್ನೆ ಮಾಡಬಹುದು. ಆದರೆ ಬದುಕಲು ಅಡ್ಡಗಾಲು ಹಾಕುವುದು ಸರಿಯಲ್ಲ ಎಂದು ತಿಳಿಸಿದರು.

ಯಾರೇ ಆಗಲಿ ಅವರ ವ್ಯಾಪಾರಕ್ಕೆ ಅಡ್ಡಿ ಮಾಡಬಾರದು. ನಾನು 11 ವರ್ಷಗಳ ಕಾಲ ಈ ಕ್ಷೇತ್ರದಲ್ಲಿ ಆಡಳಿತ ಮೊಕ್ತೇಸರನಾಗಿ ಕೆಲಸ ಮಾಡಿದ್ದೇನೆ. ಈ ದೇವಸ್ಥಾನಕ್ಕೆ ಕೈ ಮುಗಿಯಲು ಮುಸ್ಲಿಂ, ಕ್ರೈಸ್ತರು ಬರುತ್ತಾರೆ. ಈ ಪುಣ್ಯಕ್ಷೇತ್ರದಲ್ಲಿ ನಾವೇ ಜಗಳವನ್ನು ಎಳೆಯಬಾರದು ಎಂದು ಮನವಿ ಮಾಡಿದರು.

ಈ ಕ್ಷೇತ್ರ 32 ಗ್ರಾಮಗಳಿಗೆ ಸಂಬಂಧಪಟ್ಟ ದೇವಸ್ಥಾನವಾಗಿದೆ. ಮತಾಂತರ ಮಾಡಿದರೆ ಪ್ರತಿಭಟನೆ ಮಾಡಬಹುದು. ಆದರೆ ಸೌಹಾರ್ದಯುತವಾಗಿ ಬಾಳಲು ಅಡ್ಡಿ ಮಾಡಬಾರದು. ಬಪ್ಪ ಬ್ಯಾರಿ ಎಂಬ ಮುಸ್ಲಿಂ ಕ್ಷೇತ್ರವನ್ನು ಜಿರ್ಣೋದ್ಧಾರ ಮಾಡಿದ ಇತಿಹಾಸವಿದೆ ಎಂದರು.

ಭಕ್ತರು ಕ್ಷೇತ್ರದ ಸೌಹಾರ್ದತೆಗೆ, ಸಾಮರಸ್ಯಕ್ಕೆ ಪ್ರೋತ್ಸಾಹ ನೀಡಬೇಕು. ಈ ಕ್ಷೇತ್ರದಲ್ಲಿ ಎಲ್ಲರಿಗೂ ಅವಕಾಶ ನೀಡಬೇಕು. ಕೆಲವರು ಸೌಹಾರ್ದತೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಆಡಳಿತ ಮಂಡಳಿಗೆ ಆ ಉದ್ದೇಶ ಇಲ್ಲ ಎಂದು ಸ್ಪಷ್ಟ ಪಡಿಸಿದರು.

Vishwa News 24

Recent Posts

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

54 minutes ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

1 hour ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ -vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…

2 hours ago

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು -vishwanews24

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…

2 hours ago

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು -vishwanews24

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…

3 hours ago