ಮಂಗಳೂರು: ಬಪ್ಪನಾಡು ದೇವಸ್ಥಾನದ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧದ ವಿಚಾರವಾಗಿ ಕ್ಷೇತ್ರದ ಆಡಳಿತ ಮಂಡಳಿ ಸಾಮರಸ್ಯವನ್ನು ಎತ್ತಿ ಹಿಡಿದಿದೆ.
ಬಪ್ಪನಾಡು ಕ್ಷೇತ್ರದ ಹಿಂದೂ ಧಾರ್ಮಿಕ ಮುಖಂಡ, ಮಾಜಿ ಮೊಕ್ತೇಸರ ಹರಿಕೃಷ್ಣ ಪುನರೂರು ಮಾತನಾಡಿ, ಭಾರತದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ. ಕೆಲಸ ಮಾಡಿ ಬದುಕಲು ಜಾತಿಯನ್ನು ನೋಡಬಾರದು. ಮತಾಂತರ ಮಾಡಿದರೆ ಅವರನ್ನು ಪ್ರಶ್ನೆ ಮಾಡಬಹುದು. ಆದರೆ ಬದುಕಲು ಅಡ್ಡಗಾಲು ಹಾಕುವುದು ಸರಿಯಲ್ಲ ಎಂದು ತಿಳಿಸಿದರು.
ಯಾರೇ ಆಗಲಿ ಅವರ ವ್ಯಾಪಾರಕ್ಕೆ ಅಡ್ಡಿ ಮಾಡಬಾರದು. ನಾನು 11 ವರ್ಷಗಳ ಕಾಲ ಈ ಕ್ಷೇತ್ರದಲ್ಲಿ ಆಡಳಿತ ಮೊಕ್ತೇಸರನಾಗಿ ಕೆಲಸ ಮಾಡಿದ್ದೇನೆ. ಈ ದೇವಸ್ಥಾನಕ್ಕೆ ಕೈ ಮುಗಿಯಲು ಮುಸ್ಲಿಂ, ಕ್ರೈಸ್ತರು ಬರುತ್ತಾರೆ. ಈ ಪುಣ್ಯಕ್ಷೇತ್ರದಲ್ಲಿ ನಾವೇ ಜಗಳವನ್ನು ಎಳೆಯಬಾರದು ಎಂದು ಮನವಿ ಮಾಡಿದರು.
ಈ ಕ್ಷೇತ್ರ 32 ಗ್ರಾಮಗಳಿಗೆ ಸಂಬಂಧಪಟ್ಟ ದೇವಸ್ಥಾನವಾಗಿದೆ. ಮತಾಂತರ ಮಾಡಿದರೆ ಪ್ರತಿಭಟನೆ ಮಾಡಬಹುದು. ಆದರೆ ಸೌಹಾರ್ದಯುತವಾಗಿ ಬಾಳಲು ಅಡ್ಡಿ ಮಾಡಬಾರದು. ಬಪ್ಪ ಬ್ಯಾರಿ ಎಂಬ ಮುಸ್ಲಿಂ ಕ್ಷೇತ್ರವನ್ನು ಜಿರ್ಣೋದ್ಧಾರ ಮಾಡಿದ ಇತಿಹಾಸವಿದೆ ಎಂದರು.
ಭಕ್ತರು ಕ್ಷೇತ್ರದ ಸೌಹಾರ್ದತೆಗೆ, ಸಾಮರಸ್ಯಕ್ಕೆ ಪ್ರೋತ್ಸಾಹ ನೀಡಬೇಕು. ಈ ಕ್ಷೇತ್ರದಲ್ಲಿ ಎಲ್ಲರಿಗೂ ಅವಕಾಶ ನೀಡಬೇಕು. ಕೆಲವರು ಸೌಹಾರ್ದತೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಆಡಳಿತ ಮಂಡಳಿಗೆ ಆ ಉದ್ದೇಶ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…