ಪಂಜಾಬ್ : ಹುಟ್ಟು ಹಬ್ಬದ ಕೇಕ್ ತಿಂದು ಬಾಲಕಿಯೊಬ್ಬಳು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿ ಬಂದಿದ್ದು, ಅದರಲ್ಲಿ ಬಾಲಕಿಯ ಸಾವಿಗೆ ಕಾರಣ ತಿಳಿದು ಬಂದಿದೆ.
ಹುಟ್ಟುಹಬ್ಬದ ದಿನವೇ ಕೇಕ್ ತಿಂದು ಪಂಜಾಬ್ನ 10 ವರ್ಷದ ಬಾಲಕಿ ಮಾನ್ವಿ ಸಾವನ್ನಪ್ಪಿದ್ದು ದೊಡ್ಡ ಸುದ್ದಿಯಾಗಿತ್ತು. ಆನ್ ಲೈನ್ ನಲ್ಲಿ ಕೇಕ್ ತರಿಸಿ ಬಾಲಕಿಯ ಬರ್ತಡೇ ಆಚರಿಸಿದ್ದ ಪ್ಯಾಮಿಲಿ , ಕೇಕ್ ತಿಂದ ಬಾಲಕಿ ಮರುದಿನ ಆಸ್ಪತ್ರೆಯಲ್ಲಿ ಸಾವನಪ್ಪಿದ್ದರು. ಇದೀಗ ಬಾಲಕಿಯ ಮರೋಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಹೌದು, ಬಾಲಕಿ ಮೃತಪಟ್ಟ ಬಳಿಕ ಕೇಕ್ ಅನ್ನು ಸಂಗ್ರಹಿಸಿದ ಆರೋಗ್ಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದರು. ಇದೀಗ ಅದೇ ಕೇಕ್ನಲ್ಲಿ ಹೆಚ್ಚಿನ ಪ್ರಮಾಣದ ಸಿಹಿ ರುಚಿಯ ಸಿಂಥೆಟಿಕ್ ಅನ್ನು ಬಳಸಲಾಗಿದೆ. ಹೀಗಾಗಿ ಅತಿಯಾಗಿ ಕೇಕ್ ತಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಆರೋಗ್ಯ ಅಧಿಕಾರಿ, ಡಿಎಚ್ಒ ಡಾ ವಿಜಯ್ ಜಿಂದಾಲ್ ಎನ್ಡಿಟಿವಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಸ್ಯಾಕ್ರರಿನ್ ಅನ್ನು ಆಹಾರ ಮತ್ತು ಪಾನೀಯಗಳಲ್ಲಿ ಬಳಸಿದರೆ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸಲು ಕಾರಣವಾಗಬಹುದು. ಹೀಗಾಗಿ ಸಾವುಗಳು ಕೂಡ ಸಂಭವಿಸಬಹುದು ಎಂದು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…