Featured

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌!

ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್ ಅನ್ನು ಈಗ ಬೆಂಗಳೂರಿನಲ್ಲಿ ಖಾಸಗಿ ಸಮಾರಂಭಗಳು, ಕಾರ್ಪೊರೇಟ್ ಈವೆಂಟ್‌ಗಳು ಮತ್ತು ಪ್ರೀ-ವೆಡ್ಡಿಂಗ್ ಫೋಟೋಶೂಟ್‌ಗಳಿಗಾಗಿ ಬುಕ್ ಮಾಡಬಹುದಾಗಿದೆ.

ಪ್ರವಾಸೋದ್ಯಮ ಇಲಾಖೆಯ ಅಂಬಾರಿ ಡಬಲ್ ಡೆಕರ್ ಬಸ್ಗಳು ಇನ್ಮುಂದೆ ಬೆಂಗಳೂರು ನಗರದಲ್ಲಿ ಓಡಾಡಲು ಸೀಮಿತವಾಗಿರುವುದಿಲ್ಲ. ಬದಲಾಗಿ ಪ್ರಿ ವೆಡ್ಡಿಂಗ್ ಶೂಟ್, ಬರ್ತ್ ಡೇ ಸೆಲೆಬ್ರೆಶನ್ಗೆ ಬಸ್ಗಳು ಬಾಡಿಗೆಗೆ ಸಿಗಲಿವೆ.

2026ರ ಜನವರಿಯಲ್ಲಿ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್‌ಗಳ ಸೇವೆಯನ್ನು ಪ್ರಾರಂಭಿಸಲಾಯಿತು. ಕೆಎಸ್‌ಟಿಡಿಸಿ ನಿರ್ವಹಿಸುವ ಮೂರು ಬಸ್‌ಗಳು ಇದುವರೆಗೆ ಪ್ರವಾಸಿಗರಿಗೆ ನಗರ ಪರ್ಯಟನೆಯ ‘ಹಾಪ್-ಆನ್, ಹಾಪ್-ಆಫ್’ ಸೇವೆಯನ್ನು ನೀಡುತ್ತಿದ್ದವು. ಇವು ರವೀಂದ್ರ ಕಲಾಕ್ಷೇತ್ರ, ಹಡ್ಸನ್ ಸರ್ಕಲ್, ಕಸ್ತೂರ್ಬಾ ರಸ್ತೆ, ಕಂಠೀರವ ಕ್ರೀಡಾಂಗಣ, ಕಬ್ಬನ್ ರಸ್ತೆ, ವಿಧಾನ ಸೌಧ ಹಾಗೂ ವಿಶ್ವೇಶ್ವರಯ್ಯ ಮ್ಯೂಸಿಯಂ ಸೇರಿದಂತೆ ಒಟ್ಟು 26 ಪ್ರಮುಖ ಆಕರ್ಷಣೀಯ ಸ್ಥಳಗಳನ್ನು ಸುತ್ತಾಡುತ್ತಿತ್ತು.

ಇನ್ನು ಈ ಬಸ್ ಒಂದು ದಿನಕ್ಕೆ ವಾರದ ದಿನಗಳಲ್ಲಿ 32 ಸಾವಿರ ರೂಪಾಯಿ, ವಾರಾಂತ್ಯದಲ್ಲಿ 40 ಸಾವಿರ ರೂ. ಬಾಡಿಗೆ ನಿಗದಿಪಡಿಸಲಾಗಿದೆ. ಇನ್ನು ಸಮಾರಂಭಗಳು ಮತ್ತು ಪಾರ್ಟಿಗಳಿಗೆ 5 ಗಂಟೆಗಳ ಅವಧಿಗೆ ವಾರಾಂತ್ಯ (Sat-Sun): 28,000 + 5% GST, ವಾರದ ದಿನಗಳು (Mon-Fri 26,000 ರೂ. + 5% GST. ಒಂದು ವೇಳೆ ನಿಯಮಿತ ಸಮಯ ಮೀರಿದರೆ, ಇಡೀ ದಿನದ ದರ ಅನ್ವಯಿಸುತ್ತದೆ.

ಫೋಟೋಶೂಟ್‌ಗಳಿಗೆ (2 ಗಂಟೆಗಳ ಅವಧಿ) ವಾರಾಂತ್ಯ (Sat-Sun): 16,000 ರೂ. + 5% GST. ವಾರದ ದಿನಗಳು (Mon-Fri):12,000 ರೂ. + 5% GST.

2 ಗಂಟೆಗಿಂತ ಹೆಚ್ಚುವರಿ ಸಮಯಕ್ಕೆ ವಾರಾಂತ್ಯದಲ್ಲಿ ಪ್ರತಿ ಗಂಟೆಗೆ 7,000 ಹಾಗೂ ವಾರದ ದಿನಗಳಲ್ಲಿ ಪ್ರತಿ ಗಂಟೆಗೆ 6,000 ರೂಪಾಯಿ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ.

ಕೆಎಸ್‌ಟಿಡಿಸಿ ಅಧಿಕಾರಿಯೊಬ್ಬರು,ಜನವರಿಯಿಂದ ಇದುವರೆಗೆ ಸುಮಾರು 20,000 ಜನರು ಈ ಹಾಪ್-ಆನ್, ಹಾಪ್-ಆಫ್ ಸೇವೆಯನ್ನು ಬಳಸಿಕೊಂಡಿದ್ದಾರೆ. ವಾರಾಂತ್ಯಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿರುತ್ತದೆ ಹಾಗೂ ವಾರದ ದಿನಗಳಲ್ಲೂ ಉತ್ತಮ ಸ್ಪಂದನೆ ಸಿಗುತ್ತಿದೆ. ಹೀಗಾಗಿ ಸಾರ್ವಜನಿಕರಿಗೆ ಜನ್ಮದಿನದ ಆಚರಣೆಗಳು, ಕಾರ್ಪೊರೇಟ್ ಈವೆಂಟ್‌ಗಳು ಹಾಗೂ ಪ್ರೀ-ವೆಡ್ಡಿಂಗ್ ಫೋಟೋಶೂಟ್‌ಗಳಿಗೆ ಅಂಬಾರಿ ಬಸ್‌ಗಳನ್ನು ಕಾಯ್ದಿರಿಸಲು ಅವಕಾಶ ನೀಡಲು ನಿರ್ಧರಿಸಲಾಗಿದೆ.

Vishwa News 24

Recent Posts

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

30 minutes ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

3 hours ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

3 hours ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ -vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…

4 hours ago

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು -vishwanews24

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…

5 hours ago