ಬೆಂಗಳೂರು: ಇಂದು ರಿಯಲ್ ಸ್ಟಾರ್ ಉಪೇಂದ್ರಗೆ 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಶುಭ ಸಂದರ್ಭದಲ್ಲೇ ಉಪ್ಪಿ ಹೊಸ ಪಕ್ಷ ಲಾಂಚ್ ಮಾಡಿದ್ದಾರೆ.
ಹೌದು. ನಟ ಉಪೇಂದ್ರ ಅವರು ಇಂದು `ಉತ್ತಮ ಪ್ರಜಾಕೀಯ ಪಕ್ಷ’ ಎಂಬ ಹೊಸ ಪಕ್ಷವನ್ನು ಲೋಕಾರ್ಪಣೆ ಮಾಡಿದ್ದಾರೆ. ವಿನೂತನವಾಗಿ ಪಕ್ಷವನ್ನು ಲಾಂಚ್ ಮಾಡಿದ ಅವರು, ಇನ್ಮುಂದೆ ನನ್ಮ ಬರ್ತ್ ಡೇ ಯುಪಿಪಿ ಬರ್ತ್ ಡೇ ಆಗಲಿದೆ ಅಂತ ಹೇಳಿದ್ರು.
ವೇದಿಕೆ ಮೇಲೆ ಯುಪಿಪಿಐ ಎಂಬ ಪದಗಳನ್ನಿಟ್ಟು ಅದರಲ್ಲಿ ಐ ಎಂಬ ಪದಕ್ಕೆ ಬೆಂಕಿ ಹಚ್ಚಿ ಉಪ್ಪಿ ಹೆಸರಿನಲ್ಲಿ ಯುಪಿಪಿ ಮಾತ್ರ ಉಳಿದುಕೊಂಡಿದ್ದು ಐ(ನಾನು) ಅನ್ನೋದು ಹೋಗಬೇಕು. 15-20 ವರ್ಷದಿಂದ ನಾನು ಅನ್ನೋದನ್ನು ಕಿತ್ತೊಕೊಳ್ಳೋಕೆ ಇಂದು ದಿನ ಬಂತು. ಇನ್ಮೇಲೆ ಉಪ್ಪಿ ಬರ್ತ್ ಡೇ ಇರಲ್ಲ. ಇಷ್ಟು ವರ್ಷಗಳ ಕಾಲ ಅಭಿಮಾನಿಗಳು ಬರ್ತ್ ಡೇ ಯನ್ನು ಆಚರಿಸಿಕೊಂಡು ಬಂದ್ರು. ಹೀಗಾಗಿ ಇಂದು ಅಭಿಮಾನಿಳಿಗೋಸ್ಕರ ಯುಪಿಪಿ ಎಂಬ ವೇದಿಕೆಯೊಂದನ್ನು ಸಿದ್ಧಪಡಿಸಿದ್ದೇನೆ ಇನ್ಮೇಲಿಂದ ಸೆಪ್ಟೆಂಬರ್ 18ರಂದು ಯುಪಿಪಿ ಬರ್ತ್ ಡೇ ಆಗುತ್ತೆ ಅಂತ ಹೇಳಿದ್ರು
ಒಂದು ವರ್ಷದ ಹಿಂದೆ ಪ್ರಜಾಕೀಯ ಎಂಬ ಕಲ್ಪನೆಯಿಟ್ಟುಕೊಂಡು ಬಂದಿದ್ದೆವು. ಆ ಬಳಿಕ ಏನೇನೋ ಆಗೋಯ್ತು. ಹೀಗಾಗಿ ಇನ್ನೊಂದು ಪಕ್ಷದ ಜೊತೆ ಸೇರಿ ಕೋಳ್ಳೋ ಪರಿಸ್ಥಿತಿ ಎದುರಾಯ್ತು. ಹೀಗಾಗಿ ಕಳೆದ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗಿಲ್ಲ. ಆಗೋದೆಲ್ಲ ಒಳ್ಳೆಯದೇ ಅನ್ನುವಂತೆ ಎಲ್ಲವೂ ಒಳ್ಳೆದಾಗಿದೆ. ಸದ್ಯ ನಮ್ಮದೇ ಒಂದು ಪಕ್ಷವನ್ನು ರಿಜಿಸ್ಟಾರ್ ಮಾಡಿದ್ದೇವೆ. ಅದೇ ಉತ್ತಮ ಪ್ರಜಾಕೀಯ ಪಕ್ಷ ಅಂದ್ರು
ಪಕ್ಷ ಹೇಗೆ ಕೆಲಸ ಮಾಡುತ್ತೆ?:
1. ವ್ಯಾಪಾರೀ ರಾಜಕೀಯದಿಂದ ವೃತ್ತಿಪರ ಪ್ರಜಾಕೀಯದ ಕಡೆಗೆ
2. ಆಕಾಂಕ್ಷಿಗಳು ಮಾಡಿಕೋಳ್ಳಬೇಕಾದ ಪೂರ್ವ ಸಿದ್ಧತೆಗಳು
ಗ್ರಾಮಪಂಚಾಯತ್ ಚುನಾವಣೆಗೆ ನಿಲ್ಲಬೇಕಂದ್ರೆ ಗ್ರಾಮದ ಪ್ರತಿಯೊಂದು ಸಮಸ್ಯೆಗಳನ್ನು ವಿಡಿಯೋ ದಾಖಲೆಗಳನ್ನು ಮಾಡಿಕೊಂಡು ಬಳಿಕ ಅವರ ಕಲ್ಪನೆಗಳನ್ನು(ಸಿಟಿಗೂ ಅನ್ವಯಿಸುತ್ತೆ) ಮಾಡಿಕೊಂಡು ಇವುಗಳನ್ನು ಅಲ್ಲಿನ ಗ್ರಾಮದ ಜನರೊಂದಿಗೆ ಚರ್ಚೆ ನಡೆಸಿ ನಂತರ ತಜ್ಞರೊಂದಿಗೆ ಚರ್ಚಿಸಿ ಬಜೆಟ್ ಮತ್ತು ಸಮಯ ನಿಗದಿ ಮಾಡಿಕೊಂಡು ಅದನ್ನು ನಮಗೆ www.prajakeeya.org ಎಂಬ ವೆಬ್ಸೈಟ್ ಗೆ ವಿಡಿಯೋವನ್ನು ಕಳುಹಿಸಬೇಕು. ಶಾಸಕರು, ಸಂಸದರು ಕೂಡ ಇದೇ ರೀತಿ ಕಲ್ಪನೆಗಳನ್ನಿಟ್ಟುಕೊಂಡು ನಂತರ ತಜ್ಞರ ಜೊತೆ ಚರ್ಚಿಸಬೇಕು. ಫೈನಲ್ ಆದ ಬಳಿಕ ನಮಗೆ ವಿಡಿಯೋವನ್ನು ಕಳುಹಿಸಿಕೊಡಬೇಕು ಅಂತ ವಿವರಿಸಿದ್ರು.
ಯುಪಿಪಿ ಪಕ್ಷದ ಉದ್ಘಾಟನೆಗೆ ನೂರಾರು ಅಭಿಮಾನಿಗಳು ಆಗಮಿಸಿದ್ದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…