ಉಡುಪಿ : ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ಕೊರತೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದ್ದು ಬರಗಾಲ ಛಾಯೆ ಮೂಡಿದೆ. ಹೀಗಾಗಿ ಸರ್ಕಾರವು ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಈಗಾಗಲೇ ಘೋಷಣೆ ಮಾಡಿದೆ.
ಇದಕ್ಕಾಗಿ ಬರ ಪೀಡಿತ ತಾಲೂಕುಗಳ ನಿರ್ವಹಣೆಗಾಗಿ ಸರ್ಕಾರ ರಾಜ್ಯದ ಎಲ್ಲಾ ತಾಲೂಕುಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶ ಮಾಡಿದೆ. ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೂ 3 ಕೋ.ರೂ. ಮೀಸಲಿಡಲಾಗಿದೆ. ಉಡುಪಿ ಜಿಲ್ಲಾ ಬರ ನಿರ್ವಹಣೆಗೆ 4.50ಕೋ.ರೂ ಬಿಡುಗಡೆ ಮಾಡಿದೆ.
ಬರ ತಾಲೂಕುಗಳಲ್ಲಿ ಕುಡಿಯುವ ನೀರು ಸಹಿತ ವಿವಿಧ ತುರ್ತು ಕಾಮಗಾರಿಗಳಿಗೆ ಈ ಅನುದಾನ ಬಳಕೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಪ್ರತಿಕ್ರಿಯಿಸಿದ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಡುಪಿ ಜಿಲ್ಲೆಯ ಬರ ನಿರ್ವಹಣೆ ಸಂಬಂಧ ಸರಕಾರದಿಂದ ಅನುದಾನ ಮಂಜೂರಾತಿಗೆ ಆದೇಶ ಆಗಿದ್ದು, ಇದರ ಪ್ರತಿ ಇನ್ನಷ್ಟೇ ಲಭ್ಯವಾಗವೇಕಿದೆ. ಅನುದಾನವನ್ನು ನಿರ್ದಿಷ್ಟ ಮಾನದಂಡದಂತೆ ವಿನಿಯೋಗ ಮಾಡಲಾಗುತ್ತದೆ. ಉಡುಪಿಯಲ್ಲಿ ತುರ್ತು ನಿರ್ವಹಣೆಗೆ ಸುಮಾರು ೧೨ ಕೋ. ರೂ ಸದ್ಯ ಲಭ್ಯವಿದೆ ಎಂದು ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…