ಬೆಂಗಳೂರು : ‘‘ಬಲವಂತದಲ್ಲಿ ಬಂದ್ ಮಾಡಲು ನಾನು ಬಿಡಲ್ಲ. ಹಾಗೆಯೇ ಬಂದ್ ನೆಪದಲ್ಲಿ ಪ್ರತಿಭಟನಕಾರರು ಪ್ರತಿಕೃತಿ ದಹನ ಮಾಡುವುದು, ಕೆಟ್ಟದಾಗಿ ನಡೆದುಕೊಳ್ಳುವುದು ಮಾಡಿದರೆ ಅವರು ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಮರಾಠ ಅಭಿವೃದ್ದಿ ನಿಗಮದ ವಿರುದ್ದ ಕನ್ನಡ ಪರ ಸಂಘಟನೆಗಳು ಕರೆಕೊಟ್ಟಿರುವ ಬಂದ್ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ಶಾಂತಿಯುತವಾಗಿ ಅವರು ಪ್ರತಿಭಟನೆ ಮಾಡಲಿ. ಅದನ್ನು ಬಿಟ್ಟು ಬಂದ್ ಮಾಡಲು ಮುಂದಾದರೆ ಅದಕ್ಕೆ ಅವಕಾಶ ಮಾಡಿಕೊಡಲಾರೆವು. ಪ್ರತಿಭಟನೆ ಮಾಡಲು ಬೇರೆ ಸ್ವರೂಪಗಳು ಇದೆ. ಎಲ್ಲಾ ವಿಷಯಕ್ಕೂ ಬಂದ್ ಮಾಡುವುದನ್ನು ಸರಿಯಲ್ಲ, ಜನರು ಕೂಡಾ ಇದನ್ನು ಒಪ್ಪಲ್ಲ” ಎಂದು ಹೇಳಿದರು.
”ಸರ್ಕಾರ ಈವರೆಗೂ ಯಾರ ಮಧ್ಯೆಯೂ ಭೇಡ ಭಾವ ಮಾಡಿಲ್ಲ. ಜನರು ಸರ್ಕಾರದ ಉದ್ದೇಶವನ್ನು ಅರಿತು ಸಹಕರಿಸಬೇಕು. ನಮ್ಮ ಸರ್ಕಾರ ಕನ್ನಡಿಗರ ಪರವಾದ ಸರ್ಕಾರ. ಕನ್ನಡಿಗರಿಗೆ ಬೇಕಾದ ಅಧಿಕ ಸೌಲಭ್ಯ ಕಲ್ಪಿಸಲು ನಾನು ಸಿದ್ದ” ಎಂದು ಹೇಳಿದರು.
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…