ನವದೆಹಲಿ, : ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು. ಬಲಿಷ್ಠ ದೇಶದಲ್ಲಿ ಸಮರ್ಥ ನಾಗರಿಕರು ಎಂಬುದು ನಮ್ಮ ಸರ್ಕಾರದ ಧ್ಯೇಯ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು. ನಮ್ಮ ದೇಶ ಅಭಿವೃದ್ಧಿಯೆಡೆಗೆ ದಾಪುಗಾಲು ಹಾಕುತ್ತಿದೆ. ಹಾಗೇ ಇಲ್ಲಿನ ಪ್ರತಿಯೊಬ್ಬರೂ ಕೂಡ ಸಶಕ್ತ ಜೀವನ ನಡೆಸಬೇಕು ಎಂಬುದು ನಮ್ಮ ಧ್ಯೇಯವಾಗಿದ್ದು ಇನ್ನು ಮುಂದೆ ಕೂಡ ಇದೇ ರೀತಿ ಮುಂದುವರಿಯುತ್ತೇವೆ ಎಂದು ಹೇಳಿದರು.
2014ರಲ್ಲಿ 1.8 ಟ್ರಿಲಯನ್ ಅಮೆರಿಕನ್ ಡಾಲರ್ ಆರ್ಥಿಕತೆ ಇದ್ದಿದ್ದು, ಸದ್ಯ ಅದು 2.7 ಟ್ರಿಲಿಯನ್ಗೆ ತಲುಪಿದೆ. ಪ್ರಸಕ್ತ ವರ್ಷ 3 ಟ್ರಿಲಿಯನ್ ಅಮೆರಿಕನ್ ಡಾಲರ್ ಆರ್ಥಿಕತೆ ಸಾಧಿಸುವ ವಿಶ್ವಾಸವಿದೆ. ಖಂಡಿತ ಕೆಲವೇ ವರ್ಷಗಳಲ್ಲಿ ನಮ್ಮ ದೇಶದ ಆರ್ಥಿಕತೆ 5 ಟ್ರಿಲಿಯನ್ ಅಮೆರಿಕನ್ ಡಾಲರ್ಗೆ ತಲುಪಲಿದೆ. ಇದು ನಮ್ಮ ನಿಶ್ಚಿತ ಗುರಿ. ಇದಕ್ಕಾಗಿ ಮೂಲಭೂತ ಸುಧಾರಣೆ ಅಗತ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶಕ್ಕೆ ಬೇಕಾದ ಅಗತ್ಯ ಸೌಕರ್ಯಗಳು, ಡಿಜಿಟಲ್ ಆರ್ಥಿಕತೆಯ ಮೇಲೆ ಹೂಡಿಕೆ ಮಾಡುವ ಅಗತ್ಯ ಹೆಚ್ಚಾಗಿದೆ. ಅಲ್ಲದೆ, ಮಧ್ಯಮ ಮತ್ತು ಸಣ್ಣ ಉದ್ದಿಮೆಗಳಲ್ಲಿ ಉದ್ಯೋಗ ಸೃಷ್ಟಿಸಲು ಹೆಚ್ಚು ಒತ್ತು ನೀಡಬೇಕು. ಖರೀದಿ ಸಾಮರ್ಥ್ಯ ಸಮಾನತೆಯಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕತೆ ಹೊಂದಿದೆ ಎಂದು ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…