Featured

ಬಲಿಷ್ಠ ದೇಶದಲ್ಲಿ ಸಮರ್ಥ ನಾಗರಿಕರು ಎಂಬುದು ನಮ್ಮ ಸರ್ಕಾರದ ಧ್ಯೇಯ ; ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು : ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ, : ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು. ಬಲಿಷ್ಠ ದೇಶದಲ್ಲಿ ಸಮರ್ಥ ನಾಗರಿಕರು ಎಂಬುದು ನಮ್ಮ ಸರ್ಕಾರದ ಧ್ಯೇಯ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದರು.

ಬಜೆಟ್​ ಮಂಡನೆ ವೇಳೆ ಮಾತನಾಡಿದ ಅವರು, ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು. ನಮ್ಮ ದೇಶ ಅಭಿವೃದ್ಧಿಯೆಡೆಗೆ ದಾಪುಗಾಲು ಹಾಕುತ್ತಿದೆ. ಹಾಗೇ ಇಲ್ಲಿನ ಪ್ರತಿಯೊಬ್ಬರೂ ಕೂಡ ಸಶಕ್ತ ಜೀವನ ನಡೆಸಬೇಕು ಎಂಬುದು ನಮ್ಮ ಧ್ಯೇಯವಾಗಿದ್ದು ಇನ್ನು ಮುಂದೆ ಕೂಡ ಇದೇ ರೀತಿ ಮುಂದುವರಿಯುತ್ತೇವೆ ಎಂದು ಹೇಳಿದರು.

2014ರಲ್ಲಿ 1.8 ಟ್ರಿಲಯನ್​ ಅಮೆರಿಕನ್​ ಡಾಲರ್​ ಆರ್ಥಿಕತೆ ಇದ್ದಿದ್ದು, ಸದ್ಯ ಅದು 2.7 ಟ್ರಿಲಿಯನ್​ಗೆ ತಲುಪಿದೆ. ಪ್ರಸಕ್ತ ವರ್ಷ 3 ಟ್ರಿಲಿಯನ್​ ಅಮೆರಿಕನ್​ ಡಾಲರ್​ ಆರ್ಥಿಕತೆ ಸಾಧಿಸುವ ವಿಶ್ವಾಸವಿದೆ. ಖಂಡಿತ ಕೆಲವೇ ವರ್ಷಗಳಲ್ಲಿ ನಮ್ಮ ದೇಶದ ಆರ್ಥಿಕತೆ 5 ಟ್ರಿಲಿಯನ್​ ಅಮೆರಿಕನ್​ ಡಾಲರ್​ಗೆ ತಲುಪಲಿದೆ. ಇದು ನಮ್ಮ ನಿಶ್ಚಿತ ಗುರಿ. ಇದಕ್ಕಾಗಿ ಮೂಲಭೂತ ಸುಧಾರಣೆ ಅಗತ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶಕ್ಕೆ ಬೇಕಾದ ಅಗತ್ಯ ಸೌಕರ್ಯಗಳು, ಡಿಜಿಟಲ್​ ಆರ್ಥಿಕತೆಯ ಮೇಲೆ ಹೂಡಿಕೆ ಮಾಡುವ ಅಗತ್ಯ ಹೆಚ್ಚಾಗಿದೆ. ಅಲ್ಲದೆ, ಮಧ್ಯಮ ಮತ್ತು ಸಣ್ಣ ಉದ್ದಿಮೆಗಳಲ್ಲಿ ಉದ್ಯೋಗ ಸೃಷ್ಟಿಸಲು ಹೆಚ್ಚು ಒತ್ತು ನೀಡಬೇಕು. ಖರೀದಿ ಸಾಮರ್ಥ್ಯ ಸಮಾನತೆಯಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕತೆ ಹೊಂದಿದೆ ಎಂದು ತಿಳಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago