ಬಳೆತೊಟ್ಟಿಲ್ಲ ಎಂಬುದು ಆಡುಭಾಷೆ – ಬಿಜೆಪಿ ಜಿಲ್ಲಾಧ್ಯಕ್ಷರ ಬಗ್ಗೆ ಮಾತಾಡುವ ಮುನ್ನಾ ಎಚ್ಚರವಿರಲಿ:ಮಹಿಳಾ ಕಾಂಗ್ರೆಸ್ ಗೆ ಬಿಜೆಪಿ ಮಹಿಳಾಮೋರ್ಚ ಅಧ್ಯಕ್ಷೆ ವೀಣಾ ಶೆಟ್ಟಿ ತಿರುಗೇಟು
ಉಡುಪಿ: ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಐದು ಗ್ಯಾರಂಟಿ ಗಳನ್ನು ಕೂಡಲೇ ಜಾರಿಗೆ ತರಬೇಕು.ಇಲ್ಲದಿದ್ದಲ್ಲಿ ಜಿಲ್ಲಾ ಬಿಜೆಪಿ ಉಗ್ರ ಪ್ರತಿಭಟನೆಯನ್ನು ಮಾಡಲಿದೆ ಎಂದು ಹೇಳಿಕೆ ನೀಡಿರುವ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಆರೆಸ್ಸೆಸ್ ಬ್ಯಾನ್ ಮಾಡುವ ಬಗ್ಗೆ ಮಾತನಾಡುತ್ತಾ ನಾವೇನೂ ಬಳೆ ತೊಟ್ಟುಕೊಂಡು ಕುಳಿತಿಲ್ಲ ಎಂದಿದ್ದಾರೆ. ಇದು ಬಿಜೆಪಿಯವರಿಗೆ ಮಹಿಳೆಯರ ಬಗ್ಗೆ ಇರುವ ಅಗೌರವವನ್ನು ಪ್ರತಿಬಿಂಬಿಸುತ್ತದೆ.ಈ ರೀತಿಯ ಹೇಳಿಕೆಗಳನ್ನು ಕೊಡುವುದರ ಮೂಲಕ ಕುಯಿಲಾಡಿಯವರು ಇಡೀ ಮಹಿಳಾ ಕುಲಕ್ಕೇ ಅವಮಾನ ಮಾಡಿದ್ದಾರೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ವೀಣಾ ಶೆಟ್ಟಿ ಅವರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆಗೆ ತಿರುಗೇಟು ನೀಡಿದ್ದಾರೆ.
ಬಳೆತೊಟ್ಟಿಲ್ಲ ಎಂಬುದೊಂದು ಆಡು ಭಾಷೆ ಈ ವಿಚಾರದಡಿಯಲ್ಲಿ ಜಿಲ್ಲಾಧ್ಯಕ್ಷರನ್ನು ಪ್ರಶ್ನೆ ಮಾಡುವ ನೈತಿಕತೆ ಕಾಂಗ್ರೇಸ್ಸಿಗಿಲ್ಲ ಮತ್ತು ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸನ್ನು ಧೂಳಿಪಟ ಮಾಡುವಲ್ಲಿ ಸುರೇಶ್ ನಾಯಕ್ ರ ಶ್ರಮ ಅವಿರತವಾದದ್ದು ಇದರಿಂದಾಗಿ ಉಡುಪಿಯಲ್ಲಿ ಕಾಂಗ್ರೆಸ್ ವಿಚಲಿತಗೊಂಡಿದೆ.
ಜಿಲ್ಲೆಯಲ್ಲಿ ಮಹಿಳಾಮೋರ್ಚದ ಬೆಳವಣಿಗೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ಕೊಡುಗೆ ಅಪಾರವಾಗಿದ್ದು ಈ ಬಗ್ಗೆ ಕಾಂಗ್ರೆಸ್ ಚಿಂತಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…