ಬಳ್ಳಾರಿ: ಅನ್ಯ ಜಾತಿಯ ಯುವಕನ ಪ್ರೀತಿಸಿದ ಮಗಳನ್ನು ಸಿನಿಮಾ ತೋರಿಸುವ ನೆಪದಲ್ಲಿ ಕರೆದುಕೊಂಡ ಹೋಗಿ ಅಪ್ಪ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಜಿಲ್ಲೆಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿ ಬಳಿ ತುಂಗಭದ್ರ ಹೆಚ್ಎಲ್ಸಿ ಕಾಲುವೆಯಲ್ಲಿ ಈ ಘಟನೆ ನಡೆದಿದೆ.
ಕೊಲೆ ಆರೋಪಿಯನ್ನು ಓಂಕಾರಗೌಡ ಎನ್ನಲಾಗಿದ್ದು, ಈತನ ಪುತ್ರಿ ಬೇರೆ ಜಾತಿಯ ಯುವಕನನ್ನು ಪ್ರೀತಿಸಿದನ್ನು ಸಹಿಸದೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಅ. 31ರಂದು ಮಗಳನ್ನು ಸಿನಿಮಾ ತೋರಿಸುವುದಾಗಿ ಕರೆದುಕೊಂಡು ಹೋದ ಓಂಕಾರಗೌಡ ಸಿನಿಮಾ ತೋರಿಸಿ ಹೋಟೆಲ್ಗೆ ಕರೆದೊಯ್ದು ತಿಂಡಿ ತಿನ್ನಿಸಿ, ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿ ಬಳಿಕ ಅಂದು ರಾತ್ರಿ ಆಕೆಯನ್ನು ಹೆಚ್ಎಲ್ಸಿ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ತಿರುಪತಿಗೆ ಹೋಗಿ ದೇವರಿಗೆ ಕೈ ಮುಗಿದು ಉರಿಗೆ ಬಂದಿದ್ದಾನೆ. ಇದೇ ವೇಳೆ ಆತನನ್ನು ಪೋಲಿಸರು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಟ್ಲ: ಕುಡಿದ ಮತ್ತಿನಲ್ಲಿ ತಾಯಿ ಮತ್ತು ಅಣ್ಣ ನ ಮೇಲೆ ಮಾರಾಣಾಂತಿಕ ಹಲ್ಲೆ – Vishwanews24
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…