ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಸಿಪಿಐ ಆಗಿದ್ದ ಶ್ರೀಧರ ದೊಡ್ಡಿ ಅವರಿಗೆ ಬೆಂಗಳೂರಿನ ರಾಜ ಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳ ಚಿನ್ನದ ಪದಕವನ್ನು ರಾಜ್ಯಪಾಲ ವಜುಭಾಯ್ ವಾಲಾ ಪ್ರದಾನ ಮಾಡಿದ್ದಾರೆ.
’36 ವರ್ಷ ಪ್ರಾಮಾಣಿಕ ಮತ್ತು ದಕ್ಷತೆಯಿಂದ ಕೆಲಸ ಮಾಡಿದ್ದಕ್ಕೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಇದ್ದರು
,’ ಈಗ ರಾಯಚೂರು ವಿಭಾಗದ ಗುಪ್ತಚರ ದಳದ ಡಿವೈಎಸ್ಪಿ ಆಗಿ ಪದೋನ್ನತಿ ಹೊಂದಿರುವ ಶ್ರೀಧರ್ ದೊಡ್ಡಿ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ‘ಬಳ್ಳಾರಿ, ಕಲಬುರಗಿ, ಶಿವಮೊಗ್ಗ, ರಾಯಚೂರು, ಮತ್ತು ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡಿದ್ದೇನೆ. ಈ ಮುಂಚೆ 2010 ರಲ್ಲಿ ಮುಖ್ಯಮಂತ್ರಿ ಗಳ ಚಿನ್ನದ ಪದಕ ದೊರಕಿತ್ತು. ರಾಜ್ಯದಲ್ಲಿ ಒಟ್ಟು 66 ಅಧಿಕಾರಿಗಳಿಗೆ ಪ್ರಶಸ್ತಿ ನೀಡಲಾಗಿದೆ,’ ಎಂದರು.
ಆದೋನಿಯವರಾದ ದೊಡ್ಡಿಯವರು 1982ರಲ್ಲಿ ಸಿರಿಗೇರಿಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಆಗಿ ಕೆಲಸಕ್ಕೆ ಸೇರಿದ್ದರು. 2000 ರಲ್ಲಿ ಕಲಬುರಗಿ ಪಿಎಸ್ಐ, 2008ರಲ್ಲಿ ಸಿಪಿಐ ನಂತರ ಡಿವೈಎಸ್ಪಿ ಆಗಿ ಪದೋನ್ನತಿ ಪಡೆದರು.
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…