ಬಳ್ಳಾರಿ : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮಾಸುವ ಮುನ್ನವೇ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಮಹಾದೇವಿ (21) ಮೃತ ಬಾಣಂತಿ ಎಂದು ಗುರುತಿಸಲಾಗಿದೆ. ಮಹಾದೇವಿ ಅವರಿಗೆ ಜನವರಿ 25ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು.
ಸಿಸೇರಿಯನ್ ಬಳಿಕ ಬಾಣಂತಿ ಮಹಾದೇವಿ ಆರೋಗ್ಯವಾಗಿದ್ದರು. ಸಿಸೇರಿಯನ್ ಆದ ಐದು ದಿನಗಳ ಬಳಿಕ ಮಹಾದೇವಿ ಅವರಿಗೆ ಇನ್ಫೆಕ್ಷನ್ ಆಗಿದೆ ಎಂದು ವೈದ್ಯರು ಕುಟುಂಬಸ್ಥರ ಬಳಿ ಹೇಳಿದ್ದಾರೆ. ಆದರೆ, ಶುಕ್ರವಾರ ರಾತ್ರಿ ತೀವ್ರ ಅಸ್ವಸ್ಥವಾಗಿ ಬಾಣಂತಿ ಮಹಾದೇವಿ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮಹಾದೇವಿ ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಬಿಮ್ಸ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…