ಬಳ್ಳಾರಿ: ಸ್ವಾತಂತ್ರ್ಯ ಕೊಡಿಸಿದ್ದು ಕಾಂಗ್ರೆಸ್. ಬಿಜೆಪಿಯವರಾರು ಸ್ವಾತಂತ್ರ್ಯ ಹೋರಾಟ ಮಾಡಿಲ್ಲ. ಬಿಜೆಪಿಯಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾದ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014 ರಿಂದ ದೇಶ ಸಾಕಷ್ಟು ಹಿನ್ನೆಡೆ ಅನುಭವಿಸಿದೆ. ಬದುಕೋಕು ಬಿಡಲ್ಲ ಸಾಯೋಕು ಬಿಡಲ್ಲ ಸತ್ತ ಮೇಲೂ ಬಿಡೋದಿಲ್ಲ ಅಷ್ಟೊಂದು ಜಿಎಸ್ಟಿ ಹಾಕ್ತಾರೆ. ಹಿಂದುತ್ವ ಅಜೆಂಡಾ ಭಾವನೆ ಕೆರಳಿಸುತ್ತಾ ಚುನಾವಣೆ ಮಾಡ್ತಾರೆ. 40% ಭ್ರಷ್ಟಾಚಾರ ಮಾಡಿರೋ ಸರ್ಕಾರ ಕಾಂಟ್ರಾಕ್ಟರ್ ಗಳೇ ಈ ಬಗ್ಗೆ ದೂರನ್ನು ನೀಡಿದ್ದಾರೆ. ಐಟಿ, ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಚುನಾವಣೆ ಹತ್ತಿರ ಬರುತ್ತಿದ್ದಂತೆ 40% ದಿಂದ 80% ಕ್ಕೆ ಹೋದರೂ ಅಚ್ಚರಿಯಿಲ್ಲ. ಹಿಜಬ್, ಹಲಾಲ್, ಪಠ್ಯ ಪುಸ್ತಕ ಗೊಂದಲ. ಇದೇ ಈ ಸರ್ಕಾರದ ಸಾಧನೆ. ಲಿಂಗಾಯತ ಮಠವಲ್ಲ ಎಲ್ಲಾ ಸಮುದಾಯದ ಮಠಕ್ಕೆ ಹೋಗಿದ್ದೇನೆ. ಚರ್ಚ್ ಮಸೀದಿಗೂ ಹೋಗಿದ್ದೇನೆ. ಲಿಂಗಾಯತ ಪ್ರಚಾರ ಸಮಿತಿ ಅಧ್ಯಕ್ಷನಲ್ಲ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೇನೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾರೆಂದು 2018ರಲ್ಲಿ ಲಿಂಗಾಯತರು ಬಿಜೆಪಿಗೆ ಮತ ಹಾಕಿದ್ರು. ಈಗ ಪರಿಸ್ಥಿತಿ ಹಾಗಿಲ್ಲ ಈಗ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸ್ತಾರೆ ಎಂದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…