ಗದಗ :ಬಸವ ತತ್ವಕ್ಕೆ ಮಾರುಹೋದ ಮುಸ್ಲಿಂ ಯುವಕ : ಪೀಠಾಧಿಪತಿಯಾಗಲಿದ್ದಾರೆ ದಿವಾನ್ ಶರೀಫ್​ ಮುಲ್ಲಾ -Vishwanews24

ಗದಗ: ಬಸವ ತತ್ವಕ್ಕೆ ಮಾರುಹೋಗಿರುವ ಮುಸ್ಲಿಂ ಯುವಕನೊಬ್ಬ,ಲಿಂಗದೀಕ್ಷೆ ಪಡೆದು ಶಾಖಾ ಮಠವೊಂದರ ಪೀಠಾಧಿಪತಿಯಾಗುತ್ತಿರುವ ಅಪರೂಪದ ವಿದ್ಯಮಾನಕ್ಕೆ ರೋಣ ತಾಲ್ಲೂಕಿನ ಅಸೂಟಿ ಗ್ರಾಮ ಸಾಕ್ಷಿಯಾಗುತ್ತಿದೆ.

ಗ್ರಾಮದ ದಿವಾನ್ ರೆಹಮಾನ್‌ಸಾಬ್‌ ಶರೀಫ್‌(33) ಎಂಬುವರ ಪಟ್ಟಾಧಿಕಾರ ಮಹೋತ್ಸವ ಫೆ.26ರಂದು ಗ್ರಾಮದಲ್ಲಿ ನಿಗದಿಯಾಗಿದೆ. ಬಸವ ಭಕ್ತರಾಗಿರುವ ದಿವಾನ್ ಶರೀಫ್‌ ಅವರು, ಈಗಾಗಲೇ ಗುಲ್ಬರ್ಗಾ ಜಿಲ್ಲೆ ಆಳಂದ ತಾಲ್ಲೂಕಿನ ಖಜೂರಿ ಕೋರಣೇಶ್ವರ ಮಠದ ಮುರುಘೇಂದ್ರ ಕೋರಣೇಶ್ವರ ಶ್ರೀಗಳಿಂದ ಲಿಂಗದೀಕ್ಷೆ ಪಡೆದುಕೊಂಡಿದ್ದಾರೆ.

ಪಟ್ಟಾಧಿಕಾರದ ಬಳಿಕ ದಿವಾನ್ ಶರೀಫ್‌ ಅವರು ಅಸೂಟಿ ಗ್ರಾಮದ ಖಜೂರಿ ಕೋರಣೇಶ್ವರ ಶಾಖಾ ಮಠದ ಪೀಠಾಧಿಪತಿಯಾಗಿ ಮುಂದುವರಿಯಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುರುಘರಾಜೇಂದ್ರ ಕೋರಣೇಶ್ವರ ಶ್ರೀಗಳು, ಈಗಾಗಲೇ ದಿವಾನ್‌‌ ಶರೀಫ್‌‌ ಅವರಿಗೆ ಲಿಂಗದೀಕ್ಷೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ದಿನಗಳಲ್ಲಿ ಅಸೂಟಿ ಗ್ರಾಮದ ಖಜೂರಿ ಶ್ರೀಮಠ ಮತ್ತು ಶಾಂತಿಧಾಮಕ್ಕೆ ಮುಸ್ಲಿಂ ಯುವ ದಿವಾನ್ ಶರೀಫರನ್ನು ಪೀಠಾಪತಿ ಮಾಡುವ ವಿಚಾರದ ಬಗ್ಗೆ ತಿಳಿಸಿದರು.

‘ನಮ್ಮದು ಬಸವ ತತ್ವ. ನಮ್ಮಲ್ಲಿ ಎಲ್ಲ ಧರ್ಮದವರಿಗೂ ಮುಕ್ತ ಅವಕಾಶವಿದೆ. ಇದಕ್ಕೆ ಶರೀಫ್‍ ನಮ್ಮ ಅಸೂಟಿ ಮಠದ ಪೀಠಾಧಿಪತಿಯಾಗುತ್ತಿರುವುದೇ ಸಾಕ್ಷಿ. 12ನೇ ಶತಮಾನದಲ್ಲಿ ಬಸವೇಶ್ವರರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಸಾಗುತ್ತಾ ಬಂದಿದ್ದೇವೆ’ ಎಂದು ಖಜೂರಿಮಠದ ಮುರುಘೇಂದ್ರ ಕೋರಣೇಶ್ವರ ಶ್ರೀಗಳು ಪ್ರತಿಕ್ರಿಯಿಸಿದರು.

‘ತಂದೆಯವರ ಕಾಲದಿಂದಲೇ ನಾವು ಖಜೂರಿ ಕೋರಣೇಶ್ವರ ಮಠದ ಭಕ್ತರು. ತಂದೆಯವರು ಮಠದ ಗಿರಣಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಎರಡು ವರ್ಷಗಳ ಹಿಂದೆ ಅವರು ನಿಧನರಾದರು. ಅವರ ನಿಧನದ ನಂತರ ಮಠದ ಜತೆಗಿನ ಒಡನಾಟವನ್ನು ಹಿರಿಯ ಮಗನಾದ ನಾನು ಮುಂದುವರಿಸಿದ್ದೇನೆ. ಬಸವತತ್ವದಿಂದ ಪ್ರಭಾವಿತನಾಗಿ ಸಮಾಜಸೇವೆ ಮಾಡುವ ಉದ್ದೇಶದಿಂದ ಇತ್ತೀಚೆಗೆ ಶ್ರೀಗಳಿಂದ ಲಿಂಗದೀಕ್ಷೆಯನ್ನೂ ಪಡೆದಿದ್ದೇನೆ’ ಎಂದು ದಿವಾನ್ ಶರೀಫ್‌ ಪ್ರತಿಕ್ರಿಯಿಸಿದರು.

 

 

 

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

13 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

23 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

23 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

23 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 days ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 days ago