ಗದಗ :ಬಸವ ತತ್ವಕ್ಕೆ ಮಾರುಹೋದ ಮುಸ್ಲಿಂ ಯುವಕ : ಪೀಠಾಧಿಪತಿಯಾಗಲಿದ್ದಾರೆ ದಿವಾನ್ ಶರೀಫ್​ ಮುಲ್ಲಾ -Vishwanews24

ಗದಗ: ಬಸವ ತತ್ವಕ್ಕೆ ಮಾರುಹೋಗಿರುವ ಮುಸ್ಲಿಂ ಯುವಕನೊಬ್ಬ,ಲಿಂಗದೀಕ್ಷೆ ಪಡೆದು ಶಾಖಾ ಮಠವೊಂದರ ಪೀಠಾಧಿಪತಿಯಾಗುತ್ತಿರುವ ಅಪರೂಪದ ವಿದ್ಯಮಾನಕ್ಕೆ ರೋಣ ತಾಲ್ಲೂಕಿನ ಅಸೂಟಿ ಗ್ರಾಮ ಸಾಕ್ಷಿಯಾಗುತ್ತಿದೆ.

ಗ್ರಾಮದ ದಿವಾನ್ ರೆಹಮಾನ್‌ಸಾಬ್‌ ಶರೀಫ್‌(33) ಎಂಬುವರ ಪಟ್ಟಾಧಿಕಾರ ಮಹೋತ್ಸವ ಫೆ.26ರಂದು ಗ್ರಾಮದಲ್ಲಿ ನಿಗದಿಯಾಗಿದೆ. ಬಸವ ಭಕ್ತರಾಗಿರುವ ದಿವಾನ್ ಶರೀಫ್‌ ಅವರು, ಈಗಾಗಲೇ ಗುಲ್ಬರ್ಗಾ ಜಿಲ್ಲೆ ಆಳಂದ ತಾಲ್ಲೂಕಿನ ಖಜೂರಿ ಕೋರಣೇಶ್ವರ ಮಠದ ಮುರುಘೇಂದ್ರ ಕೋರಣೇಶ್ವರ ಶ್ರೀಗಳಿಂದ ಲಿಂಗದೀಕ್ಷೆ ಪಡೆದುಕೊಂಡಿದ್ದಾರೆ.

ಪಟ್ಟಾಧಿಕಾರದ ಬಳಿಕ ದಿವಾನ್ ಶರೀಫ್‌ ಅವರು ಅಸೂಟಿ ಗ್ರಾಮದ ಖಜೂರಿ ಕೋರಣೇಶ್ವರ ಶಾಖಾ ಮಠದ ಪೀಠಾಧಿಪತಿಯಾಗಿ ಮುಂದುವರಿಯಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುರುಘರಾಜೇಂದ್ರ ಕೋರಣೇಶ್ವರ ಶ್ರೀಗಳು, ಈಗಾಗಲೇ ದಿವಾನ್‌‌ ಶರೀಫ್‌‌ ಅವರಿಗೆ ಲಿಂಗದೀಕ್ಷೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ದಿನಗಳಲ್ಲಿ ಅಸೂಟಿ ಗ್ರಾಮದ ಖಜೂರಿ ಶ್ರೀಮಠ ಮತ್ತು ಶಾಂತಿಧಾಮಕ್ಕೆ ಮುಸ್ಲಿಂ ಯುವ ದಿವಾನ್ ಶರೀಫರನ್ನು ಪೀಠಾಪತಿ ಮಾಡುವ ವಿಚಾರದ ಬಗ್ಗೆ ತಿಳಿಸಿದರು.

‘ನಮ್ಮದು ಬಸವ ತತ್ವ. ನಮ್ಮಲ್ಲಿ ಎಲ್ಲ ಧರ್ಮದವರಿಗೂ ಮುಕ್ತ ಅವಕಾಶವಿದೆ. ಇದಕ್ಕೆ ಶರೀಫ್‍ ನಮ್ಮ ಅಸೂಟಿ ಮಠದ ಪೀಠಾಧಿಪತಿಯಾಗುತ್ತಿರುವುದೇ ಸಾಕ್ಷಿ. 12ನೇ ಶತಮಾನದಲ್ಲಿ ಬಸವೇಶ್ವರರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಸಾಗುತ್ತಾ ಬಂದಿದ್ದೇವೆ’ ಎಂದು ಖಜೂರಿಮಠದ ಮುರುಘೇಂದ್ರ ಕೋರಣೇಶ್ವರ ಶ್ರೀಗಳು ಪ್ರತಿಕ್ರಿಯಿಸಿದರು.

‘ತಂದೆಯವರ ಕಾಲದಿಂದಲೇ ನಾವು ಖಜೂರಿ ಕೋರಣೇಶ್ವರ ಮಠದ ಭಕ್ತರು. ತಂದೆಯವರು ಮಠದ ಗಿರಣಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಎರಡು ವರ್ಷಗಳ ಹಿಂದೆ ಅವರು ನಿಧನರಾದರು. ಅವರ ನಿಧನದ ನಂತರ ಮಠದ ಜತೆಗಿನ ಒಡನಾಟವನ್ನು ಹಿರಿಯ ಮಗನಾದ ನಾನು ಮುಂದುವರಿಸಿದ್ದೇನೆ. ಬಸವತತ್ವದಿಂದ ಪ್ರಭಾವಿತನಾಗಿ ಸಮಾಜಸೇವೆ ಮಾಡುವ ಉದ್ದೇಶದಿಂದ ಇತ್ತೀಚೆಗೆ ಶ್ರೀಗಳಿಂದ ಲಿಂಗದೀಕ್ಷೆಯನ್ನೂ ಪಡೆದಿದ್ದೇನೆ’ ಎಂದು ದಿವಾನ್ ಶರೀಫ್‌ ಪ್ರತಿಕ್ರಿಯಿಸಿದರು.

 

 

 

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

4 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

4 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago