ಗದಗ :ಬಸವ ತತ್ವಕ್ಕೆ ಮಾರುಹೋದ ಮುಸ್ಲಿಂ ಯುವಕ : ಪೀಠಾಧಿಪತಿಯಾಗಲಿದ್ದಾರೆ ದಿವಾನ್ ಶರೀಫ್​ ಮುಲ್ಲಾ -Vishwanews24

ಗದಗ: ಬಸವ ತತ್ವಕ್ಕೆ ಮಾರುಹೋಗಿರುವ ಮುಸ್ಲಿಂ ಯುವಕನೊಬ್ಬ,ಲಿಂಗದೀಕ್ಷೆ ಪಡೆದು ಶಾಖಾ ಮಠವೊಂದರ ಪೀಠಾಧಿಪತಿಯಾಗುತ್ತಿರುವ ಅಪರೂಪದ ವಿದ್ಯಮಾನಕ್ಕೆ ರೋಣ ತಾಲ್ಲೂಕಿನ ಅಸೂಟಿ ಗ್ರಾಮ ಸಾಕ್ಷಿಯಾಗುತ್ತಿದೆ.

ಗ್ರಾಮದ ದಿವಾನ್ ರೆಹಮಾನ್‌ಸಾಬ್‌ ಶರೀಫ್‌(33) ಎಂಬುವರ ಪಟ್ಟಾಧಿಕಾರ ಮಹೋತ್ಸವ ಫೆ.26ರಂದು ಗ್ರಾಮದಲ್ಲಿ ನಿಗದಿಯಾಗಿದೆ. ಬಸವ ಭಕ್ತರಾಗಿರುವ ದಿವಾನ್ ಶರೀಫ್‌ ಅವರು, ಈಗಾಗಲೇ ಗುಲ್ಬರ್ಗಾ ಜಿಲ್ಲೆ ಆಳಂದ ತಾಲ್ಲೂಕಿನ ಖಜೂರಿ ಕೋರಣೇಶ್ವರ ಮಠದ ಮುರುಘೇಂದ್ರ ಕೋರಣೇಶ್ವರ ಶ್ರೀಗಳಿಂದ ಲಿಂಗದೀಕ್ಷೆ ಪಡೆದುಕೊಂಡಿದ್ದಾರೆ.

ಪಟ್ಟಾಧಿಕಾರದ ಬಳಿಕ ದಿವಾನ್ ಶರೀಫ್‌ ಅವರು ಅಸೂಟಿ ಗ್ರಾಮದ ಖಜೂರಿ ಕೋರಣೇಶ್ವರ ಶಾಖಾ ಮಠದ ಪೀಠಾಧಿಪತಿಯಾಗಿ ಮುಂದುವರಿಯಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುರುಘರಾಜೇಂದ್ರ ಕೋರಣೇಶ್ವರ ಶ್ರೀಗಳು, ಈಗಾಗಲೇ ದಿವಾನ್‌‌ ಶರೀಫ್‌‌ ಅವರಿಗೆ ಲಿಂಗದೀಕ್ಷೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ದಿನಗಳಲ್ಲಿ ಅಸೂಟಿ ಗ್ರಾಮದ ಖಜೂರಿ ಶ್ರೀಮಠ ಮತ್ತು ಶಾಂತಿಧಾಮಕ್ಕೆ ಮುಸ್ಲಿಂ ಯುವ ದಿವಾನ್ ಶರೀಫರನ್ನು ಪೀಠಾಪತಿ ಮಾಡುವ ವಿಚಾರದ ಬಗ್ಗೆ ತಿಳಿಸಿದರು.

‘ನಮ್ಮದು ಬಸವ ತತ್ವ. ನಮ್ಮಲ್ಲಿ ಎಲ್ಲ ಧರ್ಮದವರಿಗೂ ಮುಕ್ತ ಅವಕಾಶವಿದೆ. ಇದಕ್ಕೆ ಶರೀಫ್‍ ನಮ್ಮ ಅಸೂಟಿ ಮಠದ ಪೀಠಾಧಿಪತಿಯಾಗುತ್ತಿರುವುದೇ ಸಾಕ್ಷಿ. 12ನೇ ಶತಮಾನದಲ್ಲಿ ಬಸವೇಶ್ವರರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಸಾಗುತ್ತಾ ಬಂದಿದ್ದೇವೆ’ ಎಂದು ಖಜೂರಿಮಠದ ಮುರುಘೇಂದ್ರ ಕೋರಣೇಶ್ವರ ಶ್ರೀಗಳು ಪ್ರತಿಕ್ರಿಯಿಸಿದರು.

‘ತಂದೆಯವರ ಕಾಲದಿಂದಲೇ ನಾವು ಖಜೂರಿ ಕೋರಣೇಶ್ವರ ಮಠದ ಭಕ್ತರು. ತಂದೆಯವರು ಮಠದ ಗಿರಣಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಎರಡು ವರ್ಷಗಳ ಹಿಂದೆ ಅವರು ನಿಧನರಾದರು. ಅವರ ನಿಧನದ ನಂತರ ಮಠದ ಜತೆಗಿನ ಒಡನಾಟವನ್ನು ಹಿರಿಯ ಮಗನಾದ ನಾನು ಮುಂದುವರಿಸಿದ್ದೇನೆ. ಬಸವತತ್ವದಿಂದ ಪ್ರಭಾವಿತನಾಗಿ ಸಮಾಜಸೇವೆ ಮಾಡುವ ಉದ್ದೇಶದಿಂದ ಇತ್ತೀಚೆಗೆ ಶ್ರೀಗಳಿಂದ ಲಿಂಗದೀಕ್ಷೆಯನ್ನೂ ಪಡೆದಿದ್ದೇನೆ’ ಎಂದು ದಿವಾನ್ ಶರೀಫ್‌ ಪ್ರತಿಕ್ರಿಯಿಸಿದರು.

 

 

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

18 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

19 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

20 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

20 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

20 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

20 hours ago