ಚಿಕ್ಕಮಗಳೂರು: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ಮಚ್ಚು ಹಿಡಿದು ಹತ್ತಿರ ಬಂದ್ರೆ ತಲೆ ಕಡಿಯುತ್ತೇನೆಂದು ಬಸ್ ನಿಲ್ದಾಣದಲ್ಲಿ ಅವಾಂತರ ಸೃಷ್ಠಿಸಿರುವ ಘಟನೆ ಚಿಕ್ಕಮಗಳೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ..
ರಾತ್ರಿ 12.30 ಸುಮಾರಿಗೆ ಬಸ್ ನಿಲ್ದಾಣಕ್ಕೆ ಬಂದ ಮಹಿಳೆ ಮಚ್ಚು ಹಿಡಿದು ಜನರಲ್ಲಿ ಆತಂಕ ಸೃಷ್ಟಿಸಿದ್ದಾಳೆ. ಇನ್ನು ಇವಳ ಕೈಯಲ್ಲಿಂದ ಮಚ್ಚು ಪಡೆಯಲು ಸಾರ್ವಜನಿಕರು ಮುಂದಾದಾಗ ಯಾರಾದರೂ ಹತ್ತಿರ ಬಂದರೆ ತಲೆ ಕಡಿಯುತ್ತೇನೆ ಎಂದು ಮಚ್ಚು ಬೀಸಲು ಮುಂದಾಗಿದ್ದಾಳೆ.
ಮಹಿಳೆಯ ಆರ್ಭಟಕ್ಕೆ ಬಸ್ ನಿಲ್ದಾಣದಲ್ಲಿದ್ದ ಜನರು ಕಂಗಾಲಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಕಡೆಗೆ ಒಂದು ಗಂಟೆ ಕಾಲ ಆಕೆಯ ಮನವೊಲಿಸಿ ಆಕೆಯಿಂದ ಮಚ್ಚು ಪಡೆಯುವಷ್ಟರಲ್ಲಿ ಸುಸ್ತಾಗಿದ್ದಾರೆ. ಪೊಲೀಸರು ಸಾರ್ವಜನಿಕರ ಮನವಿ ಮೇರೆಗೆ ಮಚ್ಚು ನೀಡಿದ ಮಹಿಳೆ ಬಳಿಕ ಯಾರಿಗೂ ಸಿಗದಂತೆ ಬಸ್ ನಿಲ್ದಾಣದಿಂದ ಹೊರಹೋಗಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…