ಚೆನ್ನೈ, : ಬೆಂಗಳೂರಿನಿಂದ ಹೊರಟಿದ್ದ ಕೇರಳ ರಾಜ್ಯ ಸರ್ಕಾರಿ ಬಸ್ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಸುಮಾರು 20 ಜನರು ಮೃತಪಟ್ಟಿರುವ ಘಟನೆ ಗುರುವಾರ ತಮಿಳುನಾಡಿನ ತಿರ್ಪೂರು ಜಿಲ್ಲೆಯ ಅವಿನಾಶಿ ಪಟ್ಟಣದ ಬಳಿ ನಡೆದಿದೆ.
ಈ ಅಪಘಾತ ಕೊಯಮತ್ತೂರು-ಸೇಲಂ ಹೆದ್ದಾರಿಯಲ್ಲಿ ಮುಂಜಾನೆ 4.30ರ ಸುಮಾರಿಗೆ ನಡೆದಿದ್ದು ಬಸ್ ಬೆಂಗಳೂರಿನಿಂದ ಕೇರಳದ ಎರ್ನಾಕುಳಂಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ತಿರ್ಪೂರು ಜಿಲ್ಲೆಯ ಅಧಿಕಾರಿಗಳು, ಬಸ್ಸಿನಲ್ಲಿದ್ದ 48 ಪ್ರಯಾಣಿಕರ ಪೈಕಿ 19 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮುಂದುಗಡೆಯಿಂದ ಬರುತ್ತಿದ್ದ ಲಾರಿಯ ಟೈಯರ್ ಸ್ಫೋಟಗೊಂಡ ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ವೋಲ್ವೊ ಬಸ್ಗೆ ಡಿಕ್ಕಿ ಹೊಡೆದಿದೆ ಎಂದಿದ್ದಾರೆ.
ಸದ್ಯ 20 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತಿರ್ಪೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಐವರು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 48 ಜನರಲ್ಲಿ ಬಹುತೇಕರು ಕೇರಳದವರು ಎಂದು ತಿಳಿದುಬಂದಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…