ದಾವಣಗೆರೆ,: ಕೆಎಸ್ಆರ್ಟಿಸಿ ಬಸ್ಸನ್ನು ಕೋತಿಯೊಂದು ಚಾಲನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೆಎಸ್ಆರ್ಟಿಸಿ ಅಧಿಕಾರಿಗಳು, ಆ ಬಸ್ನ ಚಾಲಕನನ್ನು ಅಮಾನತು ಮಾಡಿದ್ದಾರೆ.
ದಾವಣಗೆರೆ ಕೆಎಸ್ಆರ್ಟಿಸಿ ಡಿಪೋದ ಪ್ರಕಾಶ್ ಅಮಾನತುಗೊಂಡ ಚಾಲಕ. ದಾವಣಗೆರೆ ಡಿಪೋಗೆ ಸೇರಿರುವ ಬಸ್ಸಿನಲ್ಲಿ ಅಕ್ಟೋಬರ್ 1 ರಂದು ಘಟನೆ ನಡೆದಿದೆ. ಚಾಲಕ ಪ್ರಕಾಶ್ ಅವರು ಗೇರ್ ಹಾಕಿದರೆ, ಕೋತಿ ಸ್ಟೇರಿಂಗ್ ತಿರುಗಿಸುತ್ತಿತ್ತು. ಇದನ್ನು ನೋಡುತ್ತಿದ್ದ ಪ್ರಯಾಣಿಕರಿಗೆ ಕೊಂಚ ಮನರಂಜನೆಯಾಗಿತ್ತು. ಇದನ್ನು ಪ್ರಯಾಣಿಕರೊಬ್ಬರು ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದರು.
ದಾವಣಗೆರೆಯಿಂದ ಚಿತ್ರದುರ್ಗ ಜಿಲ್ಲೆಯ ಭರಮಸಾಗರ-ಆಲಿಕಲ್ಲುಗೆ ಬಸ್ ಹೊರಟಿತ್ತು. ಮಾರ್ಗ ಮಧ್ಯದಲ್ಲಿ ಕೋತಿಗೆ ಬಸ್ ಚಾಲನೆ ಮಾಡಲು ಪ್ರಕಾಶ್ ಕೊಟ್ಟಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸಿನಲ್ಲಿ ಸುಮಾರು ಪ್ರಯಾಣಿಕರಿದ್ದು, ಒಂದು ವೇಳೆ ಅನಾಹುತ ಸಂಭವಿಸಿದ್ದರೆ ಕೆಎಸ್ಆರ್ಟಿಸಿಗೆ ಭಾರೀ ನಷ್ಟವಾಗುತ್ತಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಚಾಲಕ ಪ್ರಕಾಶ್ನನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಬೇಜವಾಬ್ದಾರಿ ಕರ್ತವ್ಯ ದೋಷಕ್ಕೆ ಕಿಡಿಕಾರಿದ್ದಾರೆ. ಬಳಿಕ ಪ್ರಕಾಶ್ನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…