Featured

ಬಸ್ ಟಿಕೆಟ್ ದರ ಏರಿಕೆ : ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ – vishwanews24

ಬಸ್ ಟಿಕೆಟ್ ದರ ಏರಿಕೆ : ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ಸರ್ಕಾರದ ವಿರುದ್ಧ ಆಕ್ರೋಶ..

ತಡೆಯಲು ಹೋದ ಪೊಲೀಸರಿಗೆ ಎಚ್ಚರಿಕೆ ನೀಡಿದ ಅಶೋಕ್..

ಬೆಂಗಳೂರು: ನಾಲ್ಕು ನಿಗಮಗಳ ಪ್ರಯಾಣ ದರ ಏರಿಕೆ ಖಂಡಿಸಿ, ಬೆಂಗಳೂರಿನ  ಮೆಜೆಸ್ಟಿಕ್  ಬಸ್ ನಿಲ್ದಾಣದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್  ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಬಡವರಿಗೆ ಬಿಜೆಪಿ ಫ್ರೀ ಕೊಟ್ಟಿರಲಿಲ್ಲ. ಕಾಂಗ್ರೆಸ್ ಫ್ರೀ ಕೊಟ್ಟು ದರ ಏರಿಕೆ ಮಾಡಿದೆ. ಹಾಲಿನಲ್ಲಿ ಕಲ್ಲು ಹಾಕಿದ ದುರುಳರು ಇವರು. ಮದ್ಯದ ದರವೂ ಏರಿಕೆ ಮಾಡಿದ್ದೀರಿ. ವಿದ್ಯುತ್, ನೋಂದಣಿ ದರವೂ ಏರಿಕೆ ಮಾಡಿದ್ದೀರಿ. ಈ ಸರ್ಕಾರ ಎಲ್ಲದಕ್ಕೂ ಟ್ಯಾಕ್ಸ್ ಹಾಕಿದೆ. ಬಸ್ ದರ ಏರಿಕೆ ಮೂಲಕ ಬಡ ಜನರಿಗೆ ಸಿಎಂ ಒಳ್ಳೆದು ಮಾಡಿದ್ದಾರೆ. ನಾವು ಪ್ರಯಾಣಿಕರಿಗೆ ಗುಲಾಬಿ ಕೊಡುತ್ತೇವೆ. ನಮ್ಮನ್ನು ಕ್ಷಮಿಸಿ ಬಿಡಿ ಎಂದು ಗುಲಾಬಿ ಕೊಡುತ್ತೇವೆ. ಕಂದಾಯ, ಮನೆ ಬಾಡಿಗೆ ಎಲ್ಲವೂ ದರ ಏರಿಕೆಯಾಗಿದೆ. ನಾನು ಸಾರಿಗೆ ಸಚಿವ ಇದ್ದಾಗ 1 ಸಾವಿರ ಕೋಟಿ ಲಾಭ ಇತ್ತು ಎಂದು ವಾಗ್ದಾಳಿ ನಡೆಸಿದರು.

ಇನ್ನು ಇದೇ ವೇಳೆ ಪ್ರಯಾಣಿಕರಿಗೆ ಹೂ ಕೊಡಲು ಹೋದಾಗ ಅಶೋಕ್ ಅವರನ್ನು ಪೊಲೀಸರು ತಡೆದಿದ್ದಾರೆ. ಈ ಸಂದರ್ಭ ಅಶೋಕ್ ಹಾಗೂ ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಪೊಲೀಸ್ ದೌರ್ಜನ್ಯ ಬೇಡ. ರೈಟಿಂಗ್‌ನಲ್ಲಿ ಪ್ರತಿಭಟನೆ ಮಾಡಬಾರದು ಎಂದು ಕೊಡಿ. ಸರ್ಕಾರ ಇದೇ ಇರೋದಿಲ್ಲ. ನಾಟಕ ಆಡುತ್ತಿದ್ದೀರಾ ನೀವು ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಅಶೋಕ್ ಜೊತೆ ಬಿಜೆಪಿ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

8 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

11 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

11 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

11 hours ago